LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳನ್ನು ತಿಂಗಳೊಳಗೆ ಭರ್ತಿಗೆ ಕ್ರಮ : ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣ ವಿಧಾನಸೌಧ ಡಿ.11: - ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು.
ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ.  ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ.  ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿಸಿದ್ದು, ಈ ಪ್ರಕ್ರಿಯೆಯೂ ಕೂಡ ಪ್ರಗತಿಯಲ್ಲಿದೆ. ತಜ್ಞ ವೈದ್ಯರ ನೇಮಕಾತಿ ಕುರಿತಂತೆ ಹೈಕೋರ್ಟ್‍ನಲ್ಲಿದ್ದ ಪ್ರಕರಣ ಕೂಡ ಅಂತಿಮ ಹಂತದಲ್ಲಿದ್ದು, ಶೀಘ್ರ ಇತ್ಯರ್ಥಗೊಳ್ಳಲಿದೆ.  ರಾಜ್ಯದಲ್ಲಿ 600 ಶುಶ್ರೂಷಾಧಿಕಾರಿಗಳು, 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹಾಗೂ 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಕೌನ್ಸಿಲಿಂಗ್ ಮೂಲಕ ನೇಮಕ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದರು.
ವಿವಿಧ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದ್ದ ಇಲಾಖೆಯ ವೈದ್ಯರು, ಆಹಾರ ಗುಣಮಟ್ಟ ಸುರಕ್ಷತಾ ಅಧಿಕಾರಿಗಳ ನಿಯೋಜನೆಯನ್ನು ರದ್ದುಗೊಳಿಸಿ, ಇಲಾಖೆಗೆ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆಗೆ ಅಗತ್ಯ ಇರುವ ಕಡೆಗಳಲ್ಲಿ ಇವರನ್ನು ನೇಮಕ ಮಾಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್