Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ: 29,568 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ಧಾರವಾಡ : ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾಯು ಮಾರ್ಚ 18, 2026 ರಿಂದ ಏಪ್ರೀಲ್ 02, 2026 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:15 ಗಂಟೆವರೆಗೆ ಪರೀಕ್ಷೆಗಳು ಜರುಗಲಿವೆ.

ಜಿಲ್ಲೆಯಲ್ಲಿ ಒಟ್ಟು 105 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 29,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ. 26,171 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 960 ಬಾಹ್ಯ ಅಭ್ಯರ್ಥಿಯಾಗಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 2295 ವಿದ್ಯಾರ್ಥಿಗಳು ಪುನರಾವರ್ತಿತವಾಗಿ, 142 ಪುನರಾವರ್ತಿತ ಬಾಹ್ಯ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಕಲಂ 144 ರನ್ವಯ ನಿμÉೀದಾಜ್ಞೆ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲು 200 ಮೀಟರ್ ಅಂತರದಲ್ಲಿರುವ ಝರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶ ಹೊರಡಿಸಲಾಗಿದೆ. ಜಿಲ್ಲಾ ಹಂತದಲ್ಲಿ ಜಾಗೃತದಳದ ಅಧಿಕಾರಿಗಳೆಂದು ಉಪನಿರ್ದೇಶಕರು (ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರನ್ನು ನೇಮಕ ಮಾಡಲಾಗಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಿಗೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿüಕಾರಿಗಳಿಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಪೆÇೀಲಿಸ್ ಬಂದೋಬಸ್ತಗಳನ್ನು ನಿರ್ವಹಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.
ಪರೀಕ್ಷಾ ದಿನಗಳಂದು ಹೆಸ್ಕಾಂ ಅಧಿಕಾರಿಗಳಿಗೆ ತಡೆರಹಿತ ವಿದ್ಯುತ್ ಪೂರೈಸಲು ಸೂಚಿಸಲಾಗಿದೆ. ಕರ್ನಾಟಕ ಸಾರಿಗೆ ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ.

ಎಸ್.ಎಸ್.ಎಲ್.ಸಿ-2026 ರ ಪರೀಕ್ಷೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಧಾರವಾಡ ಇವರ ಹಂತದಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ವೆಬ್‍ಕಾಸ್ಟಿಂಗ್ ನಡೆಸಲಾಗುವುದು.
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರನ್ನು, ಪ್ರಶ್ನೆಪತ್ರಿಕೆಪಾಲಕರನ್ನು, ಪರೀಕ್ಷಾ ಕೇಂದ್ರಕ್ಕೆ ಸ್ಥಳೀಯ ನಿರೀಕ್ಷರನ್ನು ಮಂಡಳಿಯ ಆದೇಶದಂತೆ ನೇಮಕಮಾಡಲಾಗಿದೆ. ಪರೀಕ್ಷೆಯನ್ನು ಶಾಂತ, ಸುವ್ಯವಸ್ಥಿತ ಹಾಗೂ ಪಾರದರ್ಶಕತೆಯಿಂದ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*