LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಪಾಕಿಸ್ತಾನದ ಶೆಲ್​ ದಾಳಿ: ಹಾನಿಗೊಳಗಾದ ಮನೆಗಳಿಗೆ ಹೆಚ್ಚುವರಿ ಪರಿಹಾರ

ನವದೆಹಲಿ: ಪಾಕಿಸ್ತಾನದ ಶೆಲ್​ ದಾಳಿಯಿಂದ ಹಾನಿಗೊಳಗಾದ ಗಡಿ ಪ್ರದೇಶದ ಮನೆಗಳಿಗೆ ಹೆಚ್ವುವರಿಯಾಗಿ ಪರಿಹಾರ ನೀಡಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಇತ್ತೀಚಿಗೆ ಈ ಹೆಚ್ಚುವರಿ ಪರಿಹಾರ ಕುರಿತು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಈ ಬೆನ್ನಲ್ಲೇ ಪ್ರಕಟಣೆ ಬಿಡುಗಡೆ ಮಾಡಿರುವ ಕೇಂದ್ರ ಗೃಹ ಸಚಿವಾಲಯ, ಹಾನಿಗೊಳಗಾದ 2,060 ಮನೆಗಳಿಗೆ ಹೆಚ್ಚುವರಿಯಾಗಿ 25 ಕೋಟಿ ರೂಪಾಯಿ ಅನುದಾನವನ್ನು ನೀಡಿದ್ದಾರೆ ಎಂದು ಪಿಐಬಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕಳೆದ ವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಈ ವೇಳೆ ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾದ ಮನೆಗಳಿಗೆ ಹೆಚ್ಚುವರಿ ಪರಿಹಾರವನ್ನು ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ಸಂಪೂರ್ಣ ಹಾನಿಗೊಳಗಾದ ಪ್ರತಿ ಮನೆಗೆ 2 ಲಕ್ಷ ರೂಪಾಯಿ ಹಾಗೂ ಭಾಗಶಃ ಹಾನಿಗೊಳಗಾದ ಪ್ರತಿ ಮನೆಗೆ 1 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದರು.


ಅದರಂತೆ ಇದೀಗ ಕೇಂದ್ರ ಗೃಹ ಸಚಿವಾಲಯ, ಪ್ರಧಾನಿ ಮೋದಿ ಅವರ ಘೋಷಣೆಯಂತೆ ಪರಿಹಾರವನ್ನು ಅನುಷ್ಠಾನಗೊಳಿಸಲು ಮುಂದಾಗಿದೆ. ಪೂಂಚ್​ ಹೊರತಾಗಿ ಪಂಜಾಬ್‌ನ ಗಡಿ ಪ್ರದೇಶದಲ್ಲಿಯೂ ಇದೇ ರೀತಿ ಪರಿಹಾರ ನೀಡಲಾಗುವುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್