LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಬಂಡೀಪುರ-ವಯನಾಡ್ ನಡುವೆ ಸಂಚಾರಕ್ಕೆ ಯಾವುದೇ ತೊಡಕಿಲ್ಲ: ಸಚಿವ ಈಶ್ವರ್​ ಖಂಡ್ರೆ

ಬೆಂಗಳೂರು: ಬಂಡೀಪುರ-ವಯನಾಡ್ ನಡುವೆ ಸಂಚಾರಕ್ಕೆ ಯಾವುದೇ ತೊಡಕಿಲ್ಲ ಎಂದು ಸಚಿವ ಈಶ್ವರ್​ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.


ವಿಕಾಸಸೌಧದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಬಂಡೀಪುರ ಮತ್ತು ವಯನಾಡ್ ರಸ್ತೆಗಳ ನಡುವೆ ರಾತ್ರಿ ಸಂಚಾರದ ಕುರಿತ ಪ್ರಶ್ನೆಗೆ ಉತ್ತರಿಸಿ, "ಪ್ರಸ್ತುತ ರಾತ್ರಿ 9ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್​ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ" ಎಂದರು.


"ಅರಣ್ಯದೊಳಗೆ ಅಳವಡಿಸಲಾಗಿರುವ ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿದ್ದಿದ್ದು, ಆನೆಗಳು ಸಾವಿಗೀಡಾಗುತ್ತಿವೆ. ವಿದ್ಯುತ್ ತಂತಿ ತೂಗಾಡದಂತೆ ಕ್ರಮ ವಹಿಸಲು ಮತ್ತು ಅಂತರ್ಗತ ಕೇಬಲ್ ಅಳವಡಿಸಿಲು ವಿದ್ಯುತ್​ ಕಂಪನಿಗಳಿಗೆ ತಿಳಿಸಲಾಗಿದೆ" ಎಂದು ಹೇಳಿದರು.


"ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್​ ಸಾಫ್ಟ್ ರಿಲೀಸ್​ ಸೆಂಟರ್​) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್​ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು" ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್