LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

 ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದಾಳಿ

ಢಾಕಾ, ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ನಿಲ್ಲುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಹೊಸ ಘಟನೆಗಳಲ್ಲಿ ದುಷ್ಕರ್ಮಿಗಳು ಬಾಂಗ್ಲಾದೇಶದ ಮೈಮೆನ್‌ಸಿಂಗ್ ಮತ್ತು ದಿನಾಜ್‌ಪುರದಲ್ಲಿ ಮೂರು ಹಿಂದೂ ದೇವಾಲಯಗಳಲ್ಲಿ ಎಂಟು ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಮಾಧ್ಯಮ ವರದಿಯೊಂದು ಶುಕ್ರವಾರ ವರದಿ ಮಾಡಿದೆ.


ವ್ಯಕ್ತಿ ಬಂಧನ: ದೇವಸ್ಥಾನವೊಂದರಲ್ಲಿನ ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ವಿರುದ್ಧದ ಘಟನೆಗಳ ಸರಣಿಯಲ್ಲಿ ಇವು ಇತ್ತೀಚಿನ ವರದಿಗಳಾಗಿವೆ.


ಮೈಮೆನ್‌ಸಿಂಗ್‌ನ ಹಲುಘಾಟ್ ಉಪಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಎರಡು ದೇವಾಲಯಗಳ ಮೂರು ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ದೇವಸ್ಥಾನದ ಮೂಲಗಳು ಮತ್ತು ಸ್ಥಳೀಯರನ್ನು ಉಲ್ಲೇಖಿಸಿ, ಹಲುಘಾಟ್ ಪೊಲೀಸ್ ಠಾಣೆಯ ಅಧಿಕಾರಿ (OC) ಅಬುಲ್ ಖಯೇರ್ ಈ ಮಾಹಿತಿ ನೀಡಿದ್ದಾರೆ. ಶುಕ್ರವಾರ ಮುಂಜಾನೆ ಹಲುಘಾಟ್‌ನ ಶಾಕುವಾಯ್ ಯೂನಿಯನ್‌ನಲ್ಲಿರುವ ಬೋಂಡರ್‌ಪಾರಾ ದೇವಾಲಯದ ಎರಡು ವಿಗ್ರಹಗಳನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಮತ್ತು ಈ ಸಂಬಂಧ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಖಯೇರ್​ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್