LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೇ 15ರಂದು ‘ಶಿಖಂಡಿ’ ಕನ್ನಡ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ಬಳ್ಳಾರಿ, ಏ.30.: ಪೋಲಾ ಮೂವೀಸ್ ಪ್ರೊಡಕ್ಷನ್ ನ ಬಹು ನಿರೀಕ್ಷಿತ ‘ಶಿಖಂಡಿ’ ಕನ್ನಡ ಚಲನಚಿತ್ರವು ಮೇ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಕನ್ನಡದ ಜೊತೆಗೆ ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣಲಿದೆ.
ನಗರದ ಪೋಲಾ ಪ್ಯಾರಡೈಸ್ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಟೀಸರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಮಾತನಾಡಿದ ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್, ಇದು ತಮ್ಮ ಮೊದಲ ನಿರ್ಮಾಣವಾಗಿದ್ದು, ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆ ಅದ್ದೂರಿಯಾಗಿ ಚಿತ್ರ ನಿರ್ಮಿಸಲಾಗಿದ್ದು ಸುಮಾರು 2 ಗಂಟೆ 20 ನಿಮಿಷಗಳ ಅವಧಿಯ ಈ ಚಿತ್ರದಲ್ಲಿ ಬಳ್ಳಾರಿ ಜಿಲ್ಲೆಯ 22ಕ್ಕೂ ಹೆಚ್ಚು ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಬಳ್ಳಾರಿ, ಬೆಂಗಳೂರು, ಮೈಸೂರು ಹಾಗೂ ಮಾಗಡಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ.
ಸಮಾಜದಲ್ಲಿ ಮಂಗಳಮುಖಿಯರ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಸರಿಪಡಿಸುವ ಸಂದೇಶವನ್ನು ಚಿತ್ರ ಒಳಗೊಂಡಿದ್ದು, ಸೌದತ್ತಿ ಯಲ್ಲಮ್ಮ ದೇವಿಯ ದೈವಗೀತೆ ವಿಶೇಷ ಆಕರ್ಷಣೆಯಾಗಲಿದೆ ಎಂದು ಹೇಳಿದರು.
ನಿರ್ದೇಶಕ ಸುನಾಮಿ ಗುರುಮೂರ್ತಿ ಮಾತನಾಡಿ, ‘ಶಿಖಂಡಿ’ ಎಂಬುದು ಕೇವಲ ಹೆಸರು ಮಾತ್ರವಲ್ಲ, ಮಹಾಭಾರತದ ಪಾತ್ರದಿಂದ ಪ್ರೇರಿತವಾಗಿರುವ ವಿಶಿಷ್ಟ ಕಥಾಹಂದರ ಹೊಂದಿದ ಸಿನಿಮಾ ಇದಾಗಿದೆ. ಸಸ್ಪೆನ್ಸ್, ಥ್ರಿಲ್ಲರ್, ಹಾರರ್ ಹಾಗೂ ಫ್ಯಾಮಿಲಿ ಡ್ರಾಮಾ ಅಂಶಗಳನ್ನು ಒಳಗೊಂಡಿರುವ ಈ ರಿವೇಂಜ್ ಸ್ಟೋರಿ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎಂದು ಹೇಳಿದರು.
ಯುವರಾಜ್ ಗೌಡ ಹಾಗೂ ಖ್ಯಾತಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದು, ದೀಪಕ್ ಶೆಟ್ಟಿ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಜೋಗತಿ ಮಂಜಮ್ಮ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ದಯಾಶಂಕರ್ ಜಿ.ಎಂ. ಅವರು ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಸಹ ನಿರ್ದೇಶನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಚಿತ್ರದ ಛಾಯಾಗ್ರಹಣವನ್ನು ಮೈಸೂರು ಸ್ವಾಮಿ ನಿರ್ವಹಿಸಿದ್ದು, ಸಂಗೀತವನ್ನು ಮಂಜು ಕವಿ ಹಾಗೂ ಪ್ರಧ್ಯತ್ತಾನ್ ನೀಡಿದ್ದಾರೆ. ನೃತ್ಯ ನಿರ್ದೇಶನ ಜಗ್ಗು ಮಾಸ್ಟರ್, ಸಾಹಸ ನಿರ್ದೇಶನ ಮಾರುತಿ ಕೈಗೊಂಡಿದ್ದಾರೆ. ಬಳ್ಳಾರಿಯ ಮಂಗಳಮುಖಿ ಚಾಂದಿನಿಯು ಈ ಚಿತ್ರದಲ್ಲಿ ನಟಿಸಿದ್ದು ವಿಶಿಷ್ಟವಾಗಿದೆ. ಚಿತ್ರದ ನಾಲ್ಕು ಹಾಡುಗಳು ಈಗಾಗಲೇ ಗಮನ ಸೆಳೆದಿವೆ ಎಂದು ಚಿತ್ರತಂಡ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್