Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, 

ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಮುಖ್ಯ ವನ್ಯಜೀವಿ ಪರಿಪಾಲಕರಿಂದ ಅಧಿಕೃತ ಸುತ್ತೋಲೆ:

ಮೇ 10 ರಂದು ನಾಗಮಲೆ ಅರಣ್ಯ ಪ್ರದೇಶ, ಎಂ. ಎಂ. ಹಿಲ್ಸ್ ವನ್ಯಜೀವಿ ವಿಭಾಗದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿರುವ ಹಿನ್ನಲೆಯಲ್ಲಿ ಹಾಗೂ ವನ್ಯಪ್ರಾಣಿಗಳು ಸಂಚರಿಸುವ ಸಂಚಾರ ಪಥಗಳಲ್ಲಿ ಸಾರ್ವಜನಿಕರ ಹಾಗೂ ಟ್ರೆಕ್ಕರ್‌ಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಚಿರತೆ, ಹುಲಿ, ಆನೆ, ಕರಡಿ ಹಾಗೂ ಇತರೆ ವನ್ಯಪ್ರಾಣಿಗಳು ಸಂಚರಿಸುವ ಹಾಗೂ ಸದರಿ ಪ್ರದೇಶಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಸಂಭವವಿರುವ ಎಲ್ಲಾ ಸಂಚಾರ ಪಥಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಈ ಸೂಚನೆ ಅನ್ವಯವಾಗಲಿದೆ ಎಂದು ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Advertisement

ಹೊಸ ಎಸ್​ಒಪಿ;

ಇನ್ನುಚಾರಣ ಚಟುವಟಿಕೆಗಳಿಗೆ ಹೊಸ ಎಸ್​ಒಪಿ ಪಾಲಿಸುವುದು ಕಡ್ಡಾಯವಾಗಲಿದ್ದು, ಮುನ್ನೆಚ್ಚರಿಕೆ ಕ್ರಮಕೈಗೊಳ್ಳದ ಪಥಗಳಲ್ಲಿ ಚಟುವಟಿಕೆ ನಿಲ್ಲಿಸಲು ನಿರ್ಧರಿಸಲಾಗಿದೆ. ನಿಯಮ ಪಾಲನೆಗೆ ಸಿದ್ಧತೆ ಮಾಡಿಕೊಂಡ ನಂತರವಷ್ಟೇ ಚಾರಣಕ್ಕೆ ಅವಕಾಶ ಸಿಗಲಿದ್ದು, ಈ ಬಗ್ಗೆ ಮುಖ್ಯ ವನ್ಯಜೀವಿ ಪರಿಪಾಲಕರು ಪ್ರತ್ಯೇಕ ಸುತ್ತೋಲೆ ಹೊರಡಿಸಿದ್ದಾರೆ. ಪರಿಸರ ಪ್ರವಾಸೋದ್ಯಮ ಮಂಡಳಿ ಮೇಲ್ವಿಚಾರಣೆಯ ಪಥಗಳಿಗೂ ಇದು ಅನ್ವಯವಾಗಲಿದ್ದು, ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

 

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*