LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಉಕ್ರೇನ್ ದಾಳಿ ತೀವ್ರ; ರಷ್ಯಾದ ಕುರ್ಸ್ಕ್​ನಿಂದ 1 ಲಕ್ಷ 21 ಸಾವಿರ ಜನರ ಸ್ಥಳಾಂತರ


ಮಾಸ್ಕೋ : ಕುರ್ಸ್ಕ್ ಪ್ರದೇಶದ ಒಂಬತ್ತು ಗಡಿ ಜಿಲ್ಲೆಗಳಿಂದ 1,21,000 ಕ್ಕೂ ಹೆಚ್ಚು ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ರಷ್ಯಾ ತುರ್ತು ಸಚಿವಾಲಯದ ಉಪ ವಕ್ತಾರ ಅರ್ತ್ಯೋಮ್ ಶರೋವ್ ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ, 650 ಕ್ಕಿಂತ ಹೆಚ್ಚು ಜನ ಸ್ವಯಂಪ್ರೇರಿತವಾಗಿ ಸ್ಥಳವನ್ನು ತೊರೆದಿದ್ದಾರೆ ಅಥವಾ ಸಂಘಟಿತ ಗುಂಪುಗಳಲ್ಲಿ ಸುರಕ್ಷತೆಯೊಂದಿಗೆ ಪ್ರದೇಶದಿಂದ ಹೊರಗೆ ಬಂದಿದ್ದಾರೆ. ಜನರ ಸ್ಥಳಾಂತರ ಕಾರ್ಯಾಚರಣೆ ಈಗಲೂ ಮುಂದುವರೆದಿದೆ ಎಂದು ಶರೋವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.


ಸ್ಥಳಾಂತರಗೊಂಡ ವ್ಯಕ್ತಿಗಳನ್ನು ಅವರ ಸಂಬಂಧಿಕರ ಮನೆಗಳಿಗೆ ಅಥವಾ ತಾತ್ಕಾಲಿಕ ಆಶ್ರಯ ತಾಣಗಳಿಗೆ ಕಳುಹಿಸಲಾಗುತ್ತಿದೆ. ಕುರ್ಸ್ಕ್ ಪ್ರದೇಶದಲ್ಲಿ 84 ತಾತ್ಕಾಲಿಕ ಆಶ್ರಯಗಳನ್ನು ಸ್ಥಾಪಿಸಲಾಗಿದ್ದು, ಇವುಗಳಲ್ಲಿ ಸದ್ಯ 6,500 ಕ್ಕೂ ಹೆಚ್ಚು ಜನ ಆಶ್ರಯ ಪಡೆದಿದ್ದಾರೆ ಎಂದು ಅವರು ಹೇಳಿದರು. ರಷ್ಯಾದ 23 ಪ್ರದೇಶಗಳಲ್ಲಿ ಒಟ್ಟು 120 ತಾತ್ಕಾಲಿಕ ಆಶ್ರಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಇವುಗಳಲ್ಲಿ ಸುಮಾರು 3,000 ಜನರು ವಾಸಿಸುತ್ತಿದ್ದಾರೆ ಎಂದು ಶರೋವ್ ಮಾಹಿತಿ ನೀಡಿದರು.


ಏತನ್ಮಧ್ಯೆ, ರಷ್ಯಾದಾದ್ಯಂತ 57 ವಿವಿಧ ಪ್ರದೇಶಗಳಲ್ಲಿ ಕುರ್ಸ್ಕ್ ಪ್ರದೇಶದಿಂದ ಸ್ಥಳಾಂತರಗೊಂಡವರಿಗೆ ಆಶ್ರಯ ನೀಡಲು 19,000 ಕ್ಕೂ ಹೆಚ್ಚು ಜನರಿಗೆ ಸ್ಥಳಾವಕಾಶ ಸಾಮರ್ಥ್ಯದ ಇನ್ನೂ 390 ತಾತ್ಕಾಲಿಕ ಆಶ್ರಯ ಶಿಬಿರಗಳು ಸಿದ್ಧವಾಗಿವೆ ಎಂದು ಅವರು ಹೇಳಿದರು.


ಉಕ್ರೇನ್ ಪಡೆಗಳು ಆಕ್ರಮಣಕಾರಿಯಾಗಿ ದಾಳಿ ನಡೆಸುವುದನ್ನು ಮುಂದುವರೆಸಿದ್ದು, ಎಲ್ಲಾ ದಾಳಿಗಳನ್ನು ಹಿಮ್ಮೆಟ್ಟಿಸಲಾಗಿದೆ ರಷ್ಯಾದ ರಕ್ಷಣಾ ಸಚಿವಾಲಯ ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದೆ.










Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್