LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಮಲೇಷ್ಯಾದಲ್ಲಿ 2 ಸೇನಾ ಹೆಲಿಕಾಪ್ಟರ್ ಗಳು ಢಿಕ್ಕಿಯಾದ ಪರಿಣಾಮ 10 ಮಂದಿ ದಾರುಣ ಸಾವು

ಕೌಲಾಲಂಪುರ,23: ಅಭ್ಯಾಸದ ವೇಳೆ 2 ಹೆಲಿಕಾಪ್ಟರ್ ಗಳು ಢಿಕಿಯಾದ ಪರಿಣಾಮ ಅದರೊಳಗಿದ್ದ 10 ಮಂದಿ ಸಾವಿಗೀಡಾಗಿರುವ ಘಟನೆ ಮಲೇಷ್ಯಾದಲ್ಲಿ ನಡೆದಿದೆ.

ಮುಂದಿನ ತಿಂಗಳು ನಡೆಯಲಿರುವ ಮಲೇಷ್ಯಾ ನೌಕಾಪಡೆಯ 90ನೇ ವಾರ್ಷಿಕೋತ್ಸವದ ಅಂಗವಾಗಿ ಹೆಲಿಕಾಪ್ಟರ್‌ಗಳು ನಾರ್ತ್ ಪೆರಾಕ್ ಸ್ಟೇಟ್‌ನ ನೌಕಾ ನೆಲೆಯಲ್ಲಿ ಕಸರತ್ತು ನಡೆಸುತ್ತಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ರಾಯಲ್ ಮಲೇಷ್ಯಾ ನೇವಿ ಹೆಲಿಕಾಪ್ಟರ್ ಗಳು ಪರಸ್ಪರ ಢಿಕ್ಕಿಯಾಗಿದ್ದು, ವೈಮಾನಿಕ ಕಸರತ್ತು ನಡೆಸುತ್ತಿದ್ದ ಎಲ್ಲ 10 ಸಿಬ್ಬಂದಿ ಮೃತಪಟ್ಟಿದ್ದಾರೆ.

ಅಂತೆಯೇ ಘಟನೆಗೆ ಸಂಬಂಧಿಸಿದಂತೆ ಮಲೇಷ್ಯಾ ತನಿಖೆಗೆ ಆದೇಶಿಸಿದ್ದು, ಮೃತರ ದೇಹಗಳನ್ನು ಮಲೇಷ್ಯಾ ನೌಕಾಪಡೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲೇಷ್ಯಾದ ವಸತಿ ಮತ್ತು ಸ್ಥಳೀಯ ಸರ್ಕಾರದ ಸಚಿವಾಲಯದ ಪ್ರಕಾರ, ಎರಡು ಹೆಲಿಕಾಪ್ಟರ್‌ಗಳು ಯುರೋಕಾಪ್ಟರ್ AS555SN ಫೆನೆಕ್ ಮತ್ತು ಅಗಸ್ಟಾ-ವೆಸ್ಟ್‌ಲ್ಯಾಂಡ್ ಸಂಸ್ಥೆ ನಿರ್ಮಿಸಿದ AW-1 ಚಾಪರ್ ಮೇ ತಿಂಗಳಲ್ಲಿ ಬೇಸ್‌ನಲ್ಲಿ ನಿಗದಿಪಡಿಸಲಾದ TLDM ಫ್ಲೀಟ್ ಓಪನ್ ಡೇಗಾಗಿ ಫ್ಲೈಪಾಸ್ಟ್ ರಿಹರ್ಸಲ್‌ ಮಾಡುತ್ತಿದ್ದವು.

ಈ ವೇಳೆ ಹೆಲಿಕಾಪ್ಟರ್ ಗಳ ರೆಕ್ಕೆಗಳು ಪರಸ್ಪರ ಬಡಿದಿದ್ದು, ಈ ವೇಳೆ ಕಾಪ್ಟರ್ ಗಳನು ಪತನವಾಗಿದೆ ಎಂದು ಹೇಳಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್