LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕರ್ನಾಟಕದ ಗ್ರಾ.ಪಂಗಳಿಗೆ ಕೇಂದ್ರದ 10175 ಕೋಟಿ ರೂ ಅನುದಾನ ಬಾಕಿ: ನಾಸಿರ್ ಹುಸೇನ್

ಬಳ್ಳಾರಿ:ಫೆ,07..- 'ಕರ್ನಾಟಕ ರಾಜ್ಯದ 6 ಸಾವಿರ ಗ್ರಾಮ ಪಂಚಾಯ್ತಿ ಗಳಿಗೆ ಕೇಂದ್ರ ಸರ್ಕಾರ10175 ಕೋಟಿ ಅನುದಾನ ನೀಡಬೇಕಾಗಿರುವುದು ಬಾಕಿ ಯಿದ್ದು. ಕೂಡಲೇ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಆಗ್ರಹಿಸಿದ್ದಾರೆ.

ಅವರು ಮೊನ್ನೆ ಶೂನ್ಯ ವೇಳೆ ರಾಜ್ಯಸಭೆಯಲ್ಲಿ ಮಾತನಾಡಿ, 'ಹಣಕಾಸು ಆಯೋಗದ ಎಲ್ಲ ಅರ್ಹತೆಗಳನ್ನು ರಾಜ್ಯ ಸರ್ಕಾರ ಪೂರೈಸಿದ್ದರೂ,

15ನೇ ಹಣಕಾಸು ಆಯೋಗದ ಅಡಿಯಲ್ಲಿ 6000 ಗ್ರಾಮಗಳಿಗೆ 2133 ಕೋಟಿ ರು. ಅನುದಾನವನ್ನು ಕೇಂದ್ರ ಇನ್ನು ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಮೂಲಸೌಕರ್ಯಗಳಿಗೆ ತಡೆಯಾಗುತ್ತಿದೆ ಎಂದಿದ್ದಾರೆ.

ಮೊದಲ ಹಂತದ 1,092 ಕೋಟಿಯ ಅನುದಾನವೂ ಬಿಡುಗಡೆ ಆಗಿಲ್ಲ. ನಿಧಿಗಳನ್ನು ನಿರಂತರವಾಗಿ ತಡೆಹಿಡಿಯುವುದು ನ್ಯಾಯಸಮ್ಮತವಲ್ಲದೆ, ಗ್ರಾಮೀಣ ಆಡಳಿತಕ್ಕೆ ತೀವ ಹಾನಿಯನ್ನು ಉಂಟುಮಾಡುತ್ತಿದೆ. ಇದರಿಂದ ಸ್ವಚ್ಛತಾ ಕಾರ್ಮಿಕರು ಸೇರಿದಂತೆ ಅಗತ್ಯ ಸಿಬ್ಬಂದಿಗಳ ವೇತನ ಪಾವತಿಸಲು ಪಂಚಾಯತಿಗಳಿಗೆ ಸಾಧ್ಯವಾಗುತ್ತಿಲ್ಲ. ಕುಡಿಯುವ ನೀರು ವ್ಯವಸ್ಥೆ, ಒಳಚರಂಡಿ, ಸ್ವಚ್ಛತೆ ಮತ್ತು ಬೀದಿ ದೀಪಗಳ ನಿರ್ವಹಣೆ ಸಮಪರ್ಕವಾಗಿ ಆಗುತ್ತಿಲ್ಲ. ಹಲವಾರು ಪಂಚಾಯತಿಗಳ ಖಾತೆಗಳಲ್ಲಿ ಮೂಲಭೂತ ವೆಚ್ಚಗಳನ್ನು ಸಹ ಭರಿಸಲು ಹಣವಿಲ್ಲದ ಸ್ಥಿತಿ ಉಂಟಾಗಿದೆ.

15ನೇ ಹಣಕಾಸು ಆಯೋಗವನ್ನು ವಿಶೇಷವಾಗಿ ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಲು ಮತ್ತು ಗ್ರಾಮ ಪಂಚಾಯತಿಗಳಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸುವ ಉದ್ದೇಶದಿಂದ ನೇಮಿಸಲಾಗಿತ್ತು. ಇದಲ್ಲದೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕರ್ನಾಟಕಕ್ಕೆ 1,066 ಕೋಟಿಗಳು ಹಾಗೂ ಜಲ ಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ 6,976 ಕೋಟಿಗಳು ಬಾಕಿಯಿದೆ.

ಆದ್ದರಿಂದ, 15 ನೇ ಹಣಕಾಸು ಆಯೋಗ ಮತ್ತು ಇತರ ಯೋಜನೆಗಳ ಅಡಿಯಲ್ಲಿ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ಬಾಕಿ ಇರುವ 10175 ಕೋಟಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್