LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿದ್ಯುತ್‌ ಅವಘಡಲ್ಲಿ ಭೀಕರ ಸಾವು; 6 ತಿಂಗಳಲ್ಲಿ 118 ಮಂದಿ ದಾರುಣ ಮರಣ

ಬೆಂಗಳೂರು, ಏಪ್ರಿಲ್ 7: ಬೆಸ್ಕಾಂ ವ್ಯಾಪ್ತಿಯಲ್ಲಿ ಸಂಭವಿಸಿದ ವಿವಿಧ ವಿದ್ಯುತ್ ಅವಘಡಗಳಲ್ಲಿ ಕಳೆದ ವರ್ಷ ಕೇವಲ ಆರು ತಿಂಗಳಲ್ಲಿ 118 ಮಂದಿ ಮೃತಪಟ್ಟಿದ್ದಾರೆ. ಇದು ಹಿಂದಿನ ದಶಕವೊಂದರಲ್ಲಿ ದಾಖಲಾದ ಸರಾಸರಿ ವಾರ್ಷಿಕ ಸಾವುಗಳಿಗಿಂತ ಎರಡು ಪಟ್ಟು ಹೆಚ್ಚು ಎಂದು ವರದಿಯಾಗಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಸುಂಕ ಪರಿಷ್ಕರಣೆ ಪ್ರಸ್ತಾವನೆಯ ಭಾಗವಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (KERC) ಸಲ್ಲಿಸಿದ ವರದಿಯಿಂದ ಈ ಅಂಕಿಅಂಶ ತಿಳಿದುಬಂದಿದೆ. ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಈ ಸಾವುಗಳು ವರದಿಯಾಗಿವೆ. ಆದಾಗ್ಯೂ, ಈ ಅವಘಡಗಳಿಗೆ ಸಾರ್ವಜನಿಕರ ನಿರ್ಲಕ್ಷ್ಯವೇ ಕಾರಣ ಎಂದು ಬೆಸ್ಕಾಂ ಅಧಿಕಾರಿಗಳು ದೂಷಿಸಿದ್ದಾರೆ.

2015-2016 ರಿಂದ 2023-2024 ರ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಾವಣಗೆರೆ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೋಲಾರ ಜಿಲ್ಲೆಗಳನ್ನು ಒಳಗೊಂಡಿರುವ ಬೆಸ್ಕಾಂ ವ್ಯಾಪ್ತಿಯಲ್ಲಿ ವಾರ್ಷಿಕವಾಗಿ ಸರಾಸರಿ 109.5 ಜನರು ವಿದ್ಯುತ್ ಅಪಘಾತಗಳಲ್ಲಿ ಸಾವನ್ನಪ್ಪಿದ್ದರು. 2024 ರಲ್ಲಿ ಕೇವಲ ಆರು ತಿಂಗಳಲ್ಲಿ (ಏಪ್ರಿಲ್ ನಿಂದ ಅಕ್ಟೋಬರ್) ಆ ಸಂಖ್ಯೆ ದಾಟಿ ಸಾವುಗಳು ಸಂಭವಿಸಿವೆ. ಅದೇ ಅವಧಿಯಲ್ಲಿ, ವಿದ್ಯುತ್ ಅಪಘಾತಗಳಿಂದಾಗಿ 61 ಪ್ರಾಣಿಗಳು ಮೃತಪಟ್ಟಿವೆ ಎಂದು ಬೆಸ್ಕಾಂ ಅಂಕಿಅಂಶ ಉಲ್ಲೇಖಿಸಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್