LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜೇವರ್ಗಿ ಪುರಸಭೆಯ 13 ಜನ ಬಿಜೆಪಿ ಸದಸ್ಯರು ಜೆಡಿಎಸ್​ಗೆ ಸೇರ್ಪಡೆ

ಕಲಬುರಗಿ, ಆಗಸ್ಟ್​.19: ಜಿಲ್ಲೆಯ ಜೇವರ್ಗಿ ಪುರಸಭೆಯ 13 ಜನ ಬಿಜೆಪಿ ಸದಸ್ಯರು JDSಗೆ  ಸೇರುವ ಮೂಲಕ ಶಾಕ್ ಕೊಟ್ಟಿದ್ದಾರೆ. ನಿನ್ನೆ ಬೆಂಗಳೂರಿನ JDS​ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ 13 ಜನ  ಸೇರ್ಪಡೆಯಾಗಿದ್ದಾರೆ.

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಅವರು ಬಿಗ್ ಆಪರೇಷನ್ ಮಾಡಿ ಬಿಜೆಪಿ ಸದಸ್ಯರನ್ನ ಜೆಡಿಎಸ್​ಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. 17 ಬಿಜೆಪಿ ಸದಸ್ಯರಲ್ಲಿ 13 ಜನರನ್ನು ಸೆಳೆದು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಈ ಮೂಲಕ ಸ್ಥಳೀಯ ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ. ಕಳೆದ‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನಲೆ ದೊಡ್ಡಪ್ಪಗೌಡ ಅವರು ಜೆಡಿಎಸ್​ನಿಂದ ಸ್ಪರ್ಧಿಸಿದ್ದರು.

2008ರಲ್ಲಿ ಮಾಜಿ ಸಿಎಂ ಧರಂ ಸಿಂಗ್ ಅವರ ವಿರುದ್ಧ ಸ್ಪರ್ಧೆ ಮಾಡಿ ಗೆದ್ದು ಬೀಗಿದ್ದ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ಅವರಿಗೆ ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಇದರಿಂದ ಕಣ್ಣೀರು ಹಾಕಿದ್ದ ದೊಡ್ಡಪ್ಪಗೌಡ ಅವರು ಬಿಜೆಪಿ ವಿರುದ್ಧ ಕೆಂಡಕಾರಿದ್ದರು. ನಾನು 20 ವರ್ಷ ಪಕ್ಷ ಕಟ್ಟಿದೆ. ನಮ್ಮ ತಂದೆ ಕೂಡ ಇದೇ ಪಕ್ಷಕ್ಕೆ ದುಡಿದಿದ್ದರು. ನಮ್ಮ ಕಾರ್ಯಕರ್ತರಿಗೆ ನೋವಾದಾಗ ನಾನು ಯಾಕೆ ಆ ಪಕ್ಷದಲ್ಲಿ ಇರಬೇಕು. ಈಗ ನಾನು ನನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದರು. ಸದ್ಯ ಇದೀಗ ತಮ್ಮ ಸೇಡನ್ನು ತೀರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಮೈತ್ರಿ ಮೈತ್ರಿ ಎಂದು ಓಡಾಡುತ್ತಿರುವ ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷದಲ್ಲೇ ಬಿಗ್ ಆಪರೇಷನ್ ನಡೆದಿದೆ. ದೊಡ್ಡಪ್ಪಗೌಡ ಪಾಟೀಲ್ ಅವರು 17 ಬಿಜೆಪಿ ಸದಸ್ಯರಿಗೆ ಗಾಳ ಹಾಕಿದ್ದು 13 ಸದಸ್ಯರನ್ನು ಜೆಡಿಎಸ್​ಗೆ ಸೆಳೆದಿದ್ದಾರೆ. ಇದು ಸ್ಥಳೀಯ ಬಿಜೆಪಿ ಸದಸ್ಯರಿಗೆ ಶಾಕ್ ತಂದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್