LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಳೆ ಆರಂಭವಾಗುತ್ತಿದ್ದಂತೆಯೇ ಡೆಂಗ್ಯೂ ಭೀತಿ: 172 ಡೆಂಗೆ ಪ್ರಕರಣಗಳು ವರದಿ





ಬೆಂಗಳೂರು,17: ಮಳೆ ಆರಂಭವಾಗುತ್ತಿದ್ದಂತೆಯೇ ನಗರದಲ್ಲಿ ಡೆಂಗ್ಯೂ ಭೀತಿ ಹೆಚ್ಚಾಗುತ್ತಿದ್ದು, ಮೇ 1ರಿಂದ 13ರವರೆಗೆ ಒಟ್ಟು 172 ಡೆಂಗೆ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಪೂರ್ವ ವಲಯದ ರಾಮಸ್ವಾಮಿಪಾಳ್ಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್‌ ವಿಕಾಸ್‌ ಕಿಶೋರ್‌ ಅವರು, ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ವಾರ್ಡ್‌ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಜತೆಗೆ ಔಷಧ ಸಿಂಪಡಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಜಾಸ್ತಿಯಾಗಲಿದ್ದು, ಫಾಗಿಂಗ್‌ ಮತ್ತು ಔಷಧ ಸಿಂಪಡಣೆ ಮೂಲಕ ನಿಯಂತ್ರಿಸಬೇಕಿದೆ. ಹೂವಿನ ಕುಂಡಗಳು, ಬಿಸಾಡಿದ ಟೈರ್‌ಗಳು, ನೀರು ಸಂಗ್ರಹ ತೊಟ್ಟಿ, ನೀರಿನ ಬಾಟಲಿ ಸೇರಿದಂತೆ ಇತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ, ಇಂತಹ ಕಡೆ ನೀರು ಸಂಗ್ರಹವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರತಿಯೊಂದು ವಾರ್ಡ್‌ನಲ್ಲಿ 4 ಔಷಧಿ ಸಿಂಪಡಣೆ ಮಾಡುವ ತಂಡಗಳನ್ನು ನಿಯೋಜನೆ ಮಾಡಿದ್ದು, ತಾತ್ಕಾಲಿಕವಾಗಿ ನೀರು ನಿಲ್ಲುವ ಸ್ಥಳ ಹಾಗೂ ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಫಾಗಿಂಗ್‌ ಮತ್ತು ಔಷಧಿ ಸಿಂಪಡಣೆ ಮಾಡಲಾಗುತ್ತದೆ ಎಂದರು.

ಡೆಂಗ್ಯೂ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ವಾರ್ಡ್‌ ಮಟ್ಟದಲ್ಲಿ ಜಾಗೃತಿ ಜಾಥಾ ಹಾಗೂ ಕಸದ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಜತೆಗೆ, ಮನೆ- ಮನೆಗೆ ಡೆಂಗೆ ನಿಯಂತ್ರಣ ಕುರಿತ ಭಿತ್ತಿಪತ್ರಗಳನ್ನು ವಿತರಿಸಿ, ಪಾಲಿಸಬೇಕಾದ ಕ್ರಮಗಳ ಬಗ್ಗೆಯೂ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್