LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

18 ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿ ಶೋಧ ಮುಕ್ತಾಯ

ಮಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಸ್ಥಳ ಸಂಖ್ಯೆ 13ರಲ್ಲಿ 300ಕ್ಕೂ ಹೆಚ್ಚು ಶವಗಳನ್ನು ಹೂತು ಹಾಕಿದ್ದಾಗಿ ಹೇಳಿದ್ದು ಆ ಜಾಗದಲ್ಲಿ ನಿನ್ನೆಯಿಂದ ಅಗೆಯುವ ಕಾರ್ಯಾಚರಣೆ ಶುರುವಾಗಿತ್ತು. ಆದರೆ ಸರಿಸುಮಾರು 14 ಅಡಿ ಆಳ ಅಗೆದರೂ ಇಲ್ಲಿಯವರೆಗೂ ಒಂದೇ ಒಂದೂ ಕಳೇಬರ ಸಿಕ್ಕಿಲ್ಲ. ಹೀಗಾಗಿ ಅಗೆದಿರುವ ಜಾಗದಲ್ಲಿ ಮತ್ತೆ ಮಣ್ಣನ್ನು ಮುಚ್ಚಲಾಗುತ್ತಿದೆ.

ಪ್ರಕರಣ ಸಂಬಂಧ ಈಗಾಗಲೇ ಎಸ್ಐಟಿ 12 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು ಸ್ಥಳ ಸಂಖ್ಯೆ 6ರಲ್ಲಿ ಮಾತ್ರ ಕಳೇಬರ ಪತ್ತೆಯಾಗಿತ್ತು. ಇನ್ನು ತೀವ್ರ ಕುತೂಹಲ ಕೆರಳಿಸಿದ್ದ 13ನೇ ಸ್ಥಳದಲ್ಲಿ ನಿನ್ನೆಯಿಂದ ಅಗೆಯುವ ಕೆಲಸ ನಡೆದಿತ್ತು. ಆದರೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿರಲಿಲ್ಲ. ಇಂದು ಸಹ ಬೆಳಗ್ಗಿನಿಂದಲೇ ದೂರದಾರ ತೋರಿಸಿದ ಜಾಗಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಇಂದು ಸಂಜೆವರೆಗೂ ಯಾವುದೇ ಕಳೇಬರ ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ.

ಇನ್ನು ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಅವರನ್ನು ಎಸ್ಐಟಿ ಅಧಿಕಾರಿಗಳು ಭೇಟಿಯಾಗಿದ್ದರು. ಎಸ್ ಐಟಿ ಮುಖ್ಯ ಸ್ಥ ಪ್ರಣವ್ ಮೊಹಂತಿ, ಡಿಐಜಿಪಿ ಅನುಚೇತ್ ಭೇಟಿ ವೇಳೆ ಪರಮೇಶ್ವರ್ ಅವರು, ತನಿಖಾ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು ಶೀಘ್ರವಾಗಿ ತನಿಖೆ ಮುಗಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್