LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ

ಅಮೃತ್​ಸರ: ಅಕ್ರಮ ವಲಸಿಗರ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣ ಕ್ರಮ ತೆಗದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅಕ್ರಮ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡುತ್ತಿದ್ದಾರೆ. ಅದರಂತೆ ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ ಮರಳುತ್ತಿದ್ದಾರೆ. ಇವರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಸಿ- 17 ಅಮೃತ್​​ಸರ್​ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ.


ಮಂಗಳವಾರ ಮಧ್ಯಾಹ್ನ ಸ್ಯಾನ್ ಆಂಟೋನಿಯೊದಿಂದ ಹೊರಟಿರುವ ವಿಮಾನ ಇಂದು ಅಮೃತಸರದ ಶ್ರೀ ಗುರು ರಾಮದಾಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ. ಅಮೆರಿಕದಿಂದ ವಿಮಾನ ಹೊರಡುತ್ತಿದ್ದ ಸುದ್ದಿ ತಿಳಿಯುತ್ತಿದ್ದಂತೆ ಅಮೃತ್​ಸರದಲ್ಲಿ ಜನಸಂದಣಿ ಹೆಚ್ಚಾಗಿದೆ. ಈ ಮೊದಲು ಇಂದು ಬೆಳಗ್ಗೆ 9ಕ್ಕೆ ವಿಮಾನ ಬಂದಿಳಿಯಲಿದೆ ಎನ್ನಲಾಗಿತ್ತು. ಇದೀಗ ವಿಮಾನ ಮಧ್ಯಾಹ್ನ 1ಕ್ಕೆ ಲ್ಯಾಂಡ್​ ಆಗಲಿದೆ ಎಂದು ತಿಳಿಸಲಾಗಿದೆ.


205 ಭಾರತೀಯರನ್ನು ಹೊತ್ತ ವಿಮಾನ: ಅಮೆರಿಕದಿಂದ ಭಾರತೀಯರನ್ನು ಹೊತ್ತ ವಿಮಾನ ಹೊರಡುತ್ತಿದ್ದ ಸುದ್ದಿ ತಿಳಿಯುತ್ತಿದ್ದಂತೆ ಅವರ ಸಂಬಂಧಿಕರು ವಿಮಾನ ನಿಲ್ದಾಣದತ್ತ ಮುಖ ಮಾಡಿದ್ದಾರೆ. ವಿಮಾನದಲ್ಲಿ 11 ಮಂದಿ ಸಿಬ್ಬಂದಿ ಹಾಗೂ 45 ಅಮೆರಿಕನ್​ ಅಧಿಕಾರಿಗಳು ಇದ್ದಾರೆ. ಇವರು 205 ಭಾರತೀಯರನ್ನು ಅಮೃತ್​ಸರ ವಿಮಾನ ನಿಲ್ದಾಣದಲ್ಲಿ ಇಳಿಸಿದ ಬಳಿಕ ವಾಪಸ್​ ಆಗಲಿದೆ. ಈ 205 ಮಂದಿಯಲ್ಲಿ ಪಂಜಾಬ್​ ಹೊರತಾದ ಇತರ ರಾಜ್ಯದ ಭಾರತೀಯರು ಇದ್ದಾರೆ. ಇವರ ಆಗಮನ ಹಿನ್ನಲೆ ವಿಮಾನ ನಿಲ್ದಾಣದಲ್ಲಿ ಭಾರತೀಯ ಭದ್ರತಾ ಏಜೆನ್ಸಿಗಳನ್ನು ಕೂಡ ಸೇವೆಗೆ ನಿಯೋಜಿಸಲಾಗಿದೆ.


ಹಿನ್ನೆಲೆ ಪರೀಕ್ಷಿಸಲಿರುವ ಏಜೆನ್ಸಿ: ಲಭ್ಯವಾದ ಮೂಲಗಳ ಪ್ರಕಾರ, ಅಮೆರಿಕದಿಂದ ಅಮೃತ್​ಸರ್​​ಗೆ ಬರುತ್ತಿರುವ ಎಲ್ಲ ಜನರ ದಾಖಲೆಗಳ ಪರಿಶೀಲನೆ ನಡೆಸಲಾಗುವುದು. ಇಮಿಗ್ರೇಷನ್​ ಹೊರತಾಗಿ ಅವರ ಸಂಪೂರ್ಣ ಹಿನ್ನೆಲೆ ಅದರಲ್ಲೂ ವಿಶೇಷವಾಗಿ ಕ್ರಿಮಿನಲ್​ ರೆಕಾರ್ಡ್​ ಪರೀಕ್ಷೆ ನಡೆಸಲಾಗುವುದು. ಯಾರಾದರೂ ಕ್ರಿಮಿನಲ್​ ಹಿನ್ನೆಲೆ ಹೊಂದಿದ್ದರೆ, ಅವರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸಲಾಗುವುದು. ಮಾಹಿತಿ ಪ್ರಕಾರ, ಅಮೆರಿಕದಿಂದ ಗಡಿಪಾರಾಗಿರುವ ಭಾರತೀಯರಲ್ಲಿ ಭಾರತದಲ್ಲಿ ಅಪರಾಧ ಕೃತ್ಯ ಎಸಗಿ ಅಮೆರಿಕಕ್ಕೆ ಹೋಗಿರುವವರು ಇರಬಹುದು ಎನ್ನಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್