LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜುಲೈ ೨೦ರಂದು ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ 

ಮೂಡಲಗಿ: ತಾಲ್ಲೂಕು ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮೂಡಲಗಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಪಟ್ಟಣದ ಸಾಯಿ ವಿಜ್ಞಾಣ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ಆಶ್ರಯದಲ್ಲಿ  ಜುಲೈ ೨೦ರಂದು ಬೆಳಿಗ್ಗೆ ೧೧ಕ್ಕೆ ಮಹಾವಿದ್ಯಾಲಯದ ಸಭಾ ಭವನದಲ್ಲಿ  ಜರುಗಲಿದೆ ಎಂದು ಬೆಳಗಾವಿ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಮಿತಿ ಸದಸ್ಯ ಕೃ?ಪ್ಪ ಗಿರೆಣ್ಣವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ನೆರವೇರಿಸುವರು. ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಡಾ. ಭೀಮಶಿ ಜಾರಕಹೊಳಿ ಅವರು ವಹಿಸುವರು. ಮುಖ್ಯ ಅತಿಥಿ ಹಾಗೂ ಪದಗ್ರಹಣ ಅಧಿಕಾರಿಯಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ ಭಾಗವಹಿಸುವರು. 
ಮುಖ್ಯ ಅತಿಥಿಯಾಗಿ ಮೂಡಲಗಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ,  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಪುಂಡಲೀಕ ಬಾಳೋಜಿ, ಸದಸ್ಯ ಮಲ್ಲಿಕಾರ್ಜುನ ಗೊಂದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲ್ ಮಠದ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸನತ ಜಾರಕಿಹೊಳಿ, ಗೋಕಾಕ ಸಂಘದ ಅಧ್ಯಕ್ಷ ಗುರುರಾಜ ಪೂಜೇರಿ, ಸಾಯಿ ಮಹಾವಿದ್ಯಾಲಯದ  ಅಧ್ಯಕ್ಷ ಪುಲಕೇಶ ಸೋನವಾಲಕರ ಭಾಗವಹಿಸುವರು. 
ಗೌರವ ಅತಿಥಿಗಳಾಗಿ ತಹಶೀಲ್ದಾರರಾದ ಶ್ರೀಶೈಲ್ ಗುಡಮೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ ನೇರಲೆಕರ, ಸಿಡಿಪಿಒ ಯಲ್ಲಪ್ಪ ಗದಾಡಿ, ಸಿಪಿಐ ಶ್ರೀಶೈಲ್ ಬ್ಯಾಕೂಡ, ಹೆಸ್ಕಾ ಅಧಿಕಾರಿ ಎಂ.ಎಸ್. ನಾಗನ್ನವರ, ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ , ಪಶು ಸಂಗೋಪನೆ ಇಲಾಖೆಯ ಡಾ. ಎಂ.ಬಿ. ವಿಭೂತಿ, ಡಾ. ಮೋಹನ ಕಮತ, ಉಪ ನೋಂದಣಿಯಾಧಿಕಾರಿ ಡಿ.ಕೆ. ಕುಳ್ಳೂರ, ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ, ಪಿಎಸ್‌ಐ ರಾಜು ಪೂಜೇರಿ ಭಾಗವಹಿಸುವರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮೂಡಲಗಿ ಘಟಕದ ನೂತನ ಗೌರವಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ,  ಅಧ್ಯಕ್ಷರಾಗಿ ವೆಂಕಟೇಶ ಎಚ್. ಬಾಲರಡ್ಡಿ, ಉಪಾಧ್ಯಕ್ಷರಾಗಿ ಶಂಕರ ಹಾದಿಮನಿ ಮತ್ತು ರಾಜಶೇಖರ ಮದಗುದಮ್, ಪ್ರಧಾನ ಕಾರ್ಯದರ್ಶಿಯಾಗಿ ಸುಧಾಕರ ಉಂದ್ರಿ, ಕಾರ್ಯದರ್ಶಿಗಳಾಗಿ ಸುಭಾಸ ಗೋಡ್ಯಾಗೊಳ, ಮಹಾದೇವ ನಡುವಿನನಕೇರಿ ಹಾಗೂ ಖಜಾಂಚಿಯಾಗಿ ಶಿವಾನಂದ ಮರಾಠೆ ಆಯ್ಕೆಯಾಗಿರುವರು. 
ಸದಸ್ಯರಾಗಿ ಬಾಲಶೇಖರ ಬಂದಿ, ಎಲ್.ಡಿ. ಗಾಡವಿ, ಕೃ?ಪ್ಪ ಗಿರೆಣ್ಣವರ, ಮಲ್ಲು ಬೋಳನ್ನವರ, ಲಕ್ಷ್ಮಣ  ಅಡಿಹುಡಿ, ಅಲ್ತಾಫ್ ಹವಾಲ್ದಾರ್, ಸುರೇಶ ಬಿ. ಪಾಟೀಲ, ಹಣಮಂತ ಸತರಡ್ಡಿ, ಶಿವಾನಂದ ಹಿರೇಮಠ, ಈಶ್ವರ ಢವಳೇಶ್ವರ, ಮಧು ಪಿ ಗೌಡ, ಶೋಭಾ ವಿ. ಬಾಲರಡ್ಡಿ ಇರುವರು. ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಸಾಧನೆಗೈದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೂಡ ಜರುಗುವುದು ಎಂದು ತಿಳಿಸಿದ್ದಾರೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ