LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

22 ವಿಶ್ವವಿದ್ಯಾಲಯಗಳು ಕ್ಲೋಸ್: ಯುಜಿಸಿ ಘೋಷಣೆ




ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ ಭಾರತದೆಲ್ಲೆಡೆ 22 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿ, ಅವುಗಳನ್ನು ಅಧಿಕೃತ ಮಾನ್ಯತೆ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳೆಂದು ಘೋಷಿಸಿದೆ. ಈ ವಿಶ್ವವಿದ್ಯಾಲಯಗಳು ಯುಜಿಸಿ ಕಾಯ್ದೆ, 1956ರ ಅಡಿಯಲ್ಲಿ ಯಾವುದೇ ಕಾನೂನು ಮಾನ್ಯತೆ ಪಡೆದಿಲ್ಲ ಹಾಗೂ ನೀಡುತ್ತಿರುವ ಪದವಿಗಳು ಶೈಕ್ಷಣಿಕ ಅಥವಾ ವೃತ್ತಿಪರವಾಗಿ ಅಮಾನ್ಯವೆಂದು ಆಯೋಗ ಸ್ಪಷ್ಟಪಡಿಸಿದೆ.







ಯುಜಿಸಿಯ ಇತ್ತೀಚಿನ ಅಕ್ಟೋಬರ್ 2025ರ ಪಟ್ಟಿಯ ಪ್ರಕಾರ, ದೆಹಲಿಯಲ್ಲೇ ಅತಿ ಹೆಚ್ಚು ನಕಲಿ ವಿಶ್ವವಿದ್ಯಾಲಯಗಳು ಪತ್ತೆಯಾಗಿವೆ. ದೆಹಲಿಯ ಕೋಟ್ಲಾ ಮುಬಾರಕ್‌ಪುರದಲ್ಲಿರುವ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಎಂಜಿನಿಯರಿಂಗ್ ಸೇರಿದಂತೆ 10ಕ್ಕೂ ಹೆಚ್ಚು ಸಂಸ್ಥೆಗಳು ಮಾನ್ಯತೆ ಇಲ್ಲದೆ ಪದವಿಗಳನ್ನು ನೀಡುತ್ತಿರುವುದು ಬಹಿರಂಗವಾಗಿದೆ.



ಯುಜಿಸಿ ಹೇಳಿಕೆ ಪ್ರಕಾರ, ಈ ಸಂಸ್ಥೆಗಳು ಯಾವುದೇ ಕೇಂದ್ರ ಅಥವಾ ರಾಜ್ಯ ಕಾಯ್ದೆಯಡಿಯಲ್ಲಿ ಸ್ಥಾಪನೆಯಾಗಿಲ್ಲ ಮತ್ತು ಯುಜಿಸಿ ಕಾಯ್ದೆಯ ಸೆಕ್ಷನ್ 2(ಎಫ್) ಅಥವಾ 3ರ ಅಡಿಯಲ್ಲಿ ಮಾನ್ಯತೆ ಪಡೆದಿಲ್ಲ. ಆದ್ದರಿಂದ, ಇವು ನೀಡುವ ಪದವಿಗಳು ಶಿಕ್ಷಣ ಅಥವಾ ಉದ್ಯೋಗ ಉದ್ದೇಶಗಳಿಗೆ ಅಮಾನ್ಯ. ವಿದ್ಯಾರ್ಥಿಗಳು ಈ ಸಂಸ್ಥೆಗಳ ಮೋಸಕ್ಕೆ ಒಳಗಾಗದಂತೆ ಎಚ್ಚರಿಕೆ ನೀಡಲಾಗಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್