LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ 30 ಸಾವು: ವ್ಯಸ್ಥೆಯಲ್ಲಿ ಬದಲಾವಣೆ

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ.

ಇನ್ನುಮುಂದೆ ಯಾವುದೇ ಬಗೆಯ ವಾಹನಗಳನ್ನು ಒಳಗೆ ಬಿಡುವುದಿಲ್ಲ. ಮೌನಿ ಅಮಾವಾಸ್ಯೆಯಂದು ಕಾಲ್ತುಳಿತದಲ್ಲಿ 30 ಭಕ್ತರು ಸಾವನ್ನಪ್ಪಿದರೆ, 60 ಭಕ್ತರು ಗಾಯಗೊಂಡಿದ್ದಾರೆ. ಸಂಪೂರ್ಣ ವಾಹನ ರಹಿತ ವಲಯವಾಗಿದ್ದು, ಎಲ್ಲಾ ರೀತಿಯ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

ವಿವಿಐಪಿ ಪಾಸ್‌ಗಳನ್ನು ರದ್ದುಗೊಳಿಸಲಾಗಿದೆ- ಯಾವುದೇ ವಿಶೇಷ ಪಾಸ್ ಮೂಲಕ ವಾಹನಗಳಿಗೆ ಪ್ರವೇಶವನ್ನು ಅನುಮತಿಸಲಾಗುವುದಿಲ್ಲ. ರಸ್ತೆಗಳು ಏಕಮುಖ – ಭಕ್ತರ ಸುಗಮ ಸಂಚಾರಕ್ಕಾಗಿ ಏಕಮುಖ ರಸ್ತೆ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.



ವಾಹನಗಳ ಪ್ರವೇಶಕ್ಕೆ ನಿರ್ಬಂಧ: ಪ್ರಯಾಗ್‌ರಾಜ್‌ಗೆ ಹೊಂದಿಕೊಂಡಿರುವ ಜಿಲ್ಲೆಗಳಿಂದ ಬರುವ ವಾಹನಗಳನ್ನು ಜಿಲ್ಲೆಯ ಗಡಿಯಲ್ಲಿ ನಿಲ್ಲಿಸಲಾಗುತ್ತಿದೆ. ಫೆಬ್ರವರಿ 4 ರವರೆಗೆ ಕಟ್ಟುನಿಟ್ಟಿನ ನಿರ್ಬಂಧಗಳು – ನಗರದಲ್ಲಿ ನಾಲ್ಕು ಚಕ್ರಗಳ ವಾಹನಗಳ ಪ್ರವೇಶಕ್ಕೆ ಸಂಪೂರ್ಣ ನಿಷೇಧವಿದೆ.

ಕುಂಭ ಪ್ರದೇಶದಲ್ಲಿ ಜನಸಂದಣಿಯನ್ನು ನಿಯಂತ್ರಿಸುವುದು ಮತ್ತು ಭಕ್ತರ ಸುರಕ್ಷತೆಯನ್ನು ಖಚಿತಪಡಿಸುವುದು ಈ ಬದಲಾವಣೆಗಳ ಉದ್ದೇಶವಾಗಿದೆ. ಭಕ್ತರು ಆಡಳಿತದ ಸೂಚನೆಗಳನ್ನು ಪಾಲಿಸಿ ಯಾವುದೇ ರೀತಿಯ ಅವ್ಯವಸ್ಥೆ ಆಗದಂತೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಪ್ರಯಾಗ್​ರಾಜ್, ಕೌಶಂಬಿ, ವಾರಣಾಸಿ, ಅಯೋಧ್ಯೆ, ಮಿರ್ಜಾಪುರ, ಬಸ್ತಿ, ಜಾನ್‌ಪುರ್, ಚಿತ್ರಕೂಟ, ಬಂದಾ, ಅಂಬೇಡ್ಕರ್‌ನಗರ, ಪ್ರತಾಪಗಢ ಸೇರಿದಂತೆ ಹಲವು ಜಿಲ್ಲೆಗಳ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಅಧಿಕಾರಿಗಳೊಂದಿಗೆ ತಡರಾತ್ರಿ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಬೀದಿ ಬದಿ ವ್ಯಾಪಾರಿಗಳು ತಮ್ಮ ವ್ಯಾಪಾರವನ್ನು ರಸ್ತೆಗಳಲ್ಲಿ ನಡೆಸುತ್ತಿದ್ದರೆ, ಅವರನ್ನು ಖಾಲಿ ಪ್ರದೇಶಗಳಿಗೆ ಸ್ಥಳಾಂತರಿಸಬೇಕು ಮತ್ತು ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು, ಮೇಳಕ್ಕೆ ಭೇಟಿ ನೀಡುವ ಜನರನ್ನು ಅನಗತ್ಯವಾಗಿ ನಿಲ್ಲಿಸಬಾರದು ಎಂದು ಆದಿತ್ಯನಾಥ್ ಹೇಳಿದರು. ಪ್ರಯಾಗರಾಜ್‌ನ ಎಲ್ಲಾ ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದ್ದು, ತಮ್ಮ ಪವಿತ್ರ ಸ್ನಾನವನ್ನು ಮುಗಿಸಿ ಮನೆಗೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ