LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇನ್ಫೋಸಿಸ್​ನಿಂದ 32,403 ಕೋಟಿ ರೂ ಜಿಎಸ್​ಟಿ ಬಾಕಿ?!

ಬೆಂಗಳೂರು, ಆಗಸ್ಟ್ 1: ವಿದೇಶಗಳಲ್ಲಿರುವ ತನ್ನ ಶಾಖಾ ಘಟಕಗಳಿಂದ ಸೇವೆ ಪಡೆದದ್ದಕ್ಕೆ ಇನ್ಫೋಸಿಸ್ ಜಿಎಸ್​ಟಿ ಪಾವತಿಸಿಲ್ಲ ಎಂದು ತೆರಿಗೆ ಇಲಾಖೆ ಆರೋಪಿಸಿದೆ. 2017ರಿಂದ 2022ರವರೆಗೆ ಐದು ವರ್ಷದಲ್ಲಿ ಬರೋಬ್ಬರಿ 32,403.46 ಕೋಟಿ ರೂ ಮೊತ್ತದ ಐಜಿಎಸ್​ಟಿ ಪಾವತಿಸಬೇಕು ಎಂದು ಇನ್ಫೋಸಿಸ್​ಗೆ ಬೆಂಗಳೂರಿನ ಜಿಎಸ್​ಟಿ ಅಧಿಕಾರಿಗಳು ನೋಟೀಸ್ ಕೊಟ್ಟಿದ್ದಾರೆ.

ಕುತೂಹಲ ಎಂದರೆ ಬಾಕಿ ಇದೆ ಎನ್ನಲಾದ ಇಷ್ಟು ಐಜಿಎಸ್​ಟಿ ಹಣವು ಇನ್ಫೋಸಿಸ್​ನ ಐದು ವರ್ಷದ ಲಾಭಕ್ಕೆ ಸಮ ಎನ್ನಲಾಗಿದೆ. ಇನ್ಫೋಸಿಸ್ ಸಂಸ್ಥೆ ಜಿಎಸ್​ಟಿ ಪ್ರಾಧಿಕಾರದ ಈ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಬಗ್ಗೆ ಪ್ರತಿಕ್ರಿಯಿಸಿದ್ದು, ತಾನು ಯಾವುದೇ ತೆರಿಗೆ ನಿಯಮ ಉಲ್ಲಂಘಿಸಿಲ್ಲ, ಅಥವಾ ಬಾಕಿ ಉಳಿಸಿಕೊಂಡಿಲ್ಲ ಎಂದು ಷೇರು ವಿನಿಯಮ ಕೇಂದ್ರಕ್ಕೆ ಸಲ್ಲಿಸಿದ ಫೈಲಿಂಗ್​ನಲ್ಲಿ ತಿಳಿಸಿದೆ.

ಇನ್ಫೋಸಿಸ್ ವಿದೇಶಗಳಲ್ಲಿ ಬ್ರ್ಯಾಂಚ್ ಆಫೀಸ್​ಗಳನ್ನು ಸ್ಥಾಪಿಸಿದೆ. ಆ ಶಾಖಾ ಕಚೇರಿಗಳಿಂದ ಪಡೆದ ಸರಬರಾಜುಗಳಿಗೆ ಸಂಸ್ಥೆ ಹಣ ಪಾವತಿಸಿದೆ. 2017ರ ಜುಲೈನಿಂದ ಆರಂಭವಾಗಿ 2021-22ರ ಹಣಕಾಸು ವರ್ಷದವರೆಗೆ ರಿವರ್ಸ್ ಚಾರ್ಜ್ ಮೆಕ್ಯಾನಿಸಂ ಅಡಿಯಲ್ಲಿ ಇನ್ಫೋಸಿಸ್ ಸಂಸ್ಥೆ 32,403.46 ಕೋಟಿ ರೂ ಐಜಿಎಸ್​ಟಿ ಪಾವತಿಸಬೇಕಿತ್ತು… ಇನ್ಫೋಸಿಸ್ ಸಂಸ್ಥೆ ತನ್ನ ಎಕ್ಸ್​ಪೋರ್ಟ್ ಇನ್ವಾಯ್ಸ್ ಅಡಿಯಲ್ಲಿ ಆ ವೆಚ್ಚಗಳನ್ನು ತೋರಿಸಿದೆ ಎಂದು ಕರ್ನಾಟಕ ರಾಜ್ಯ ಜಿಎಸ್​ಟಿ ಪ್ರಾಧಿಕಾರ ತನ್ನ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್​ನಲ್ಲಿ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್