LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಂಸತ್ತಿನಲ್ಲಿ 33% ಮಹಿಳಾ ಮೀಸಲಾತಿ: 2029ರಲ್ಲಿ ನಾರಿಶಕ್ತಿ ಪ್ರಭಾವ — ಹೇಮಲತಾ ನಾಯಕ






ಬಳ್ಳಾರಿ, ಏ.15: ಬರುವ 2029ರ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಜಾರಿಯಾಗಿ, ನಾರಿಶಕ್ತಿ ಸಂಸತ್ತಿನಲ್ಲಿ ಶಕ್ತಿಯುತವಾಗಿ ಪ್ರತಿನಿಧಿಸಲಿದೆ ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ವಿಶ್ವಾಸ ವ್ಯಕ್ತಪಡಿಸಿದರು.


ನಗರದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಜಾರಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಸಂಸತ್ತಿನ ವಿಶೇಷ ಅಧಿವೇಶನ ಕರೆದಿರುವುದು ಇತಿಹಾಸಾತ್ಮಕ ಬೆಳವಣಿಗೆ ಎಂದರು.


“ಮಹಿಳಾ ಮೀಸಲಾತಿ ಮಸೂದೆ ಹಲವು ವರ್ಷಗಳಿಂದ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಪ್ರಸ್ತಾಪವಾದರೂ ಅನುಷ್ಠಾನಕ್ಕೆ ಬಂದಿರಲಿಲ್ಲ. ಆದರೆ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಇದನ್ನು ಜಾರಿಗೆ ತರುವ ದಿಟ್ಟ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ 2029ರೊಳಗೆ ಮಹಿಳೆಯರಿಗೆ ಶೇ 33ರಷ್ಟು ಪ್ರತಿನಿಧಿತ್ವ ದೊರೆಯುವುದು ಖಚಿತ” ಎಂದು ಹೇಳಿದರು.


ಹಿಂದಿನ ದಿನಗಳಲ್ಲಿ ಸಂಸತ್ತಿನಲ್ಲಿ ಮಹಿಳಾ ಸದಸ್ಯರ ಪ್ರಮಾಣ ಕೇವಲ ಶೇ 4ರಷ್ಟಿತ್ತು. ಬಸವರಾಜೇಶ್ವರಿ, ನಾಗಮ್ಮ ಕೇಶವಮೂರ್ತಿ ಮೊದಲಾದ ನಾಯಕರಿಂದ ಪ್ರೇರಿತರಾಗಿ ಅನೇಕ ಮಹಿಳೆಯರು ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. 2019ರ ವೇಳೆಗೆ ಮಹಿಳಾ ಸದಸ್ಯರ ಪ್ರಮಾಣ ಶೇ 15ರಷ್ಟು ಏರಿಕೆಯಾಗಿದೆ ಎಂದು ಅವರು ವಿವರಿಸಿದರು.


ಮಹಿಳಾ ಮೀಸಲಾತಿ ವಿಚಾರಕ್ಕೆ ದೇಶದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ವಿರೋಧ ಪಕ್ಷಗಳ ಆಕ್ಷೇಪಗಳ ನಡುವೆಯೂ ಎನ್‌ಡಿಎ ಸರ್ಕಾರ ಇದನ್ನು ಜಾರಿಗೆ ತರುವ ಬದ್ಧತೆಯಿದೆ. 2029ರ ಚುನಾವಣೆಯ ವೇಳೆಗೆ ಮಹಿಳೆಯರು ತಮ್ಮ ಹಕ್ಕಿನ ಮೀಸಲಾತಿ ಅನುಭವಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.


ಮಹಿಳಾ ಸಬಲೀಕರಣದ ದೃಷ್ಠಿಯಿಂದ ‘ಡ್ರೋಣ್ ದೀದಿ’, ‘ಮುದ್ರಾ’ ಯೋಜನೆಗಳಂತಹ ವಿವಿಧ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇದರ ಮೂಲಕ ಮಹಿಳೆಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶಕ್ತಿಶಾಲಿಗಳಾಗುತ್ತಿದ್ದಾರೆ ಎಂದು ಅವರು ಹೇಳಿದರು.


ಸುದ್ದಿಗೋಷ್ಠಿಯಲ್ಲಿ ಡಾ. ಸುಧಾ, ವಿಜಯಲಕ್ಷ್ಮಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಹಂಪಿ ರಮಣ, ಮುಖಂಡರಾದ ಡಾ. ಅರುಣಾ ಕಾಮಿನೇನಿ, ಡಾ. ರೇಣುಕಾ ಮಂಜುನಾಥ, ಅಲುವೇಲು, ಸಾಧನಾ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್