LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಸ್ಸಾಂ ಪ್ರವಾಹಕ್ಕೆ ಅಸುನೀಗಿದ 38 ಮಂದಿ

ಗುವಾಹಟಿ(ಅಸ್ಸಾಂ): ಅಸ್ಸಾಂ ಪ್ರವಾಹಕ್ಕೆ ಈಗಾಗಲೇ 38 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮೂವರು ನೆರೆ ನೀರಿನಲ್ಲಿ ಮುಳುಗಿ ಅಸುನೀಗಿದ್ದಾರೆ. ರಾಜ್ಯ ಪ್ರಕೃತಿ ವಿಕೋಪ ನಿರ್ವಹಣೆ ಪ್ರಾಧಿಕಾರದ ವರದಿ ಪ್ರಕಾರ, ತಿನ್‌ಸುಕಿಯಾ ಮತ್ತು ಧೆಮಾಜಿ ಜಿಲ್ಲೆಯಲ್ಲಿ ತಲಾ ಒಬ್ಬೊಬ್ಬರು ನೀರಿನಲ್ಲಿ ಮಳುಗಿ ಪ್ರಾಣ ಕಳೆದುಕೊಂಡಿದ್ದಾರೆ.

ರಾಜ್ಯದ ಪ್ರವಾಹ ಪರಿಸ್ಥಿತಿ ಮಂಗಳವಾರ ಮತ್ತಷ್ಟು ಗಂಭೀರ ಸ್ವರೂಪ ಪಡೆಯಿತು. ಈಗಾಗಲೇ 28 ಜಿಲ್ಲೆಗಳಲ್ಲಿ ಅಂದಾಜು 11.34 ಲಕ್ಷ ಜನರು ತೊಂದರೆಗೊಳಗಾಗಿದ್ದಾರೆ. ಕಮ್ರೂಪ್, ತಮಲ್‌ಪುರ್, ಮೋರಿಗಾಂವ್‌, ಲಖೀಂಪುರ್‌, ಬಿಸ್ವನಾಥ್, ದೀಬ್ರುಘರ್‌, ಕರೀಂಗಂಜ್, ಉಡಲ್‌ಗುರಿ, ನಾವಾಂವ್, ಸೋನಿಟ್‌ಪುರ್ ಗೋಲಾಘಾಟ್, ನಲ್ಬರಿ ಹಾಗು ಜೋರಾಹಟ್ ಸೇರಿದಂತೆ ಹಲವು ಜಿಲ್ಲೆಗಳನ್ನು ಪ್ರವಾಹ ಆವರಿಸಿಕೊಂಡಿದೆ.

ಪ್ರವಾಹದ ನೀರಿಗೆ 42,476.18 ಹೆಕ್ಟೇರ್‌ ಕೃಷಿ ಭೂಮಿ ಮುಳುಗಿದೆ. 88 ಕಂದಾಯ ವೃತ್ತಗಳ 2,208 ಗ್ರಾಮಗಳು ಎರಡನೇ ಅಲೆಯ ಪ್ರವಾಹದಿಂದ ತತ್ತರಿಸಿವೆ. ಬ್ರಹ್ಮಪುತ್ರಾ ನದಿ ನೀಮಾಟಿಘಾಟ್, ತೇಜ್‌ಪುರ್‌, ಗುವಾಹಟಿ ಮತ್ತು ದುಬ್ರಿ ಎಂಬಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅದೇ ರೀತಿ ಸುಬಾನ್ಸಿರಿ ನದಿ ಕೂಡಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕ್ಷಣ ಕ್ಷಣಕ್ಕೂ ನದಿ ಪಾತ್ರದ ಜನರ ಆತಂಕ ಹೆಚ್ಚಿಸುತ್ತಿದೆ.

ಪ್ರವಾಹಪೀಡಿತ ಜಿಲ್ಲೆಗಳಲ್ಲಿ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಸರ್ಕಾರ 489 ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಇವುಗಳಲ್ಲಿ 2.87 ಲಕ್ಷ ಜನರು ಆಶ್ರಯ ಪಡೆದಿದ್ದಾರೆ. ಭೀಕರ ನೆರೆಯಿಂದಾಗಿ ಮಂಗಳವಾರ ಒಂದೇ ದಿನ 74 ರಸ್ತೆಗಳು, 6 ಸೇತುವೆಗಳು ಕೊಚ್ಚಿಹೋಗಿವೆ. ಇನ್ನೊಂದೆಡೆ, ಪ್ರವಾಹಪೀಡಿತರ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್