LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕ್ಷೇತ್ರ ಅಧ್ಯಯನ ಪ್ರವಾಸ ಜ್ಞಾನ ವಿಕಾಸಕ್ಕೆ ಪೂರಕ : ತಳವಾರ

ಸಂಕೇಶ್ವರ : ಸ್ಥಳೀಯ ಪಿ.ಎಮ್ ಶ್ರೀ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರ ಧಾರವಾಡ ಕೃಷಿ ವಿಶ್ವ ವಿದ್ಯಾಲಯಕ್ಕೆ ಕ್ಷೇತ್ರ ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು.

ಮಕ್ಕಳಿಗೆ ಪಠ್ಯ ಪುಸ್ತಕದ ಜೊತೆಗೆ ವೀಕ್ಷಣೆ ಮೂಲಕ ಜ್ಞಾನ ವಿಕಾಸಕ್ಕೆ ಪೂರಕವಾಗುವ ಉದ್ದೇಶದಿಂದ ಮಕ್ಕಳಿಗೆ ಕ್ಷೇತ್ರ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಕರಾದ ಎ.ಎ.ತಳವಾರ ತಿಳಿಸಿದರು.

ವಿದ್ಯಾರ್ಥಿಗಳಿಗೆ ಎಂ.ಕೆ ಹುಬ್ಬಳ್ಳಿಯಲ್ಲಿರುವ ಬಸವಣ್ಣನವರ ಮಡದಿಯ ಐಕ್ಯ ಸ್ಥಳಕ್ಕೆ ಭೇಟಿ ನೀಡಿ ನಂತರ ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಡಾ ! ವಿ.ಬಿ.ಕುಲಿಗೋಡ ಅವರನ್ನು ಭೇಟಿ ಮಾಡಿ ಪರಿಸರದ ಬಗ್ಗೆ ಮಾಹಿತಿ ಪಡೆಯಲಾಯಿತು.

ಕೃಷಿ ವಿಧ್ಯಾರ್ಥಿಗಳು ಬೆಳೆದ ಬೆಳೆಗಳಾದ ಹತ್ತಿ, ಕಾಳು ಮೆಣಸು ಹಾಗೂ ವಿವಿಧ ತರಹದ ಜೋಳದ ಬೆಳೆಗಳು ಮತ್ತು ಔಷಧಿ ಸಸ್ಯಗಳು, ಮರಗಳ ಪ್ರಾಮುಖ್ಯತೆ ಬಗ್ಗೆ
ಮಕ್ಕಳು ಮಾಹಿತಿ ಪಡೆದರು.

ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪ್ರಾಯೋಗಿಕ ಕಲಿಕೆಯ ಅರಿವನ್ನು ಮಕ್ಕಳಲ್ಲಿ ಮೂಡಿಸಿದರು. ದ.ರಾ.ಬೇಂದ್ರೆಯವರ ಸ್ವಗೃಹಕ್ಕೆ ಮಕ್ಕಳು ಭೇಟಿ ಹಾಗೂ ವಿನಯ ಕುಲಕರ್ಣಿಯವರು ಡೈರಿ ಫಾರ್ಂನ ವೈಶಿಷ್ಟತೆಯನ್ನು ಗಮನಿಸಿದರು.

ಶಾಲೆಯ ಮುಖ್ಯೋಪಾಧ್ಯಾಕರಾದ ಎ.ಎ.ತಳವಾರ, ಶಿಕ್ಷಕರಾದ ಬಿ.ಎಮ್.ವಾದರೆ, ಎಸ್.ಟಿ. ಮದ್ಯಾಪಗೋಳ್, ಎಸ್.ಎಚ್ ಬಾಗವಾನ, ಪ್ರಿಯಾಂಕಾ ಬಂದಾಯಿ, ಎಲ್.ಎ. ಮಿರಜಕರ್, ಗೀತಾ ಮುಧೋಳ, ಶಬಾನಾ ಹುಣಶಿಕಟ್ಟಿ, ಸೈರಾಭಾನು ರವಡೂರ, ಬಿ.ಬಿ.ಪಾಟೀಲ, ಸಾವಂತನ್ನರ ಸೇರಿದಂತೆ ಅನೇಕರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್