LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ನೇತಾಜಿ ಅವರ ದೇಶಪ್ರೇಮ, ಹೋರಾಟ, ತ್ಯಾಗ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ"

ಇಂಡಿ: ನೇತಾಜಿ ಅವರಲ್ಲಿದ್ದ ಧೈರ್ಯಗಾರಿಕೆಯನ್ನು ಇಂದಿನ ವಿದ್ಯಾರ್ಥಿಗಳು ಪಾಲಿಸುವ ಮೂಲಕ ಬದುಕಿನ ಕಠಿಣ ಪರಿಸ್ಥಿತಿಗಳಲ್ಲಿ ಜಯ ಸಾಧಿಸುವುದನ್ನು ಕಲಿಯಬೇಕೆಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ನಿಮಿತ್ತ ಹಮ್ಮಿಕೊಂಡ ’ಪರಾಕ್ರಮ ದಿವಸ’ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ ಮತ್ತು ರೋಗಗಳನ್ನು ಹೋಗಲಾಡಿಸಲು ಸ್ವಾವಲಂಬಿ ಭಾರತ ನಿರ್ಮಾಣದ ಕನಸು ಕಂಡ ನೇತಾಜಿ ಅವರ ದೇಶಪ್ರೇಮ, ಹೋರಾಟ, ತ್ಯಾಗ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂದು ಹೇಳಿದರು.
ನೇತಾಜಿ ಅವರಲ್ಲಿದ್ದ ಧೈರ್ಯ, ಭಕ್ತಿ, ಶಿಸ್ತು, ನಾಯಕತ್ವ, ಸಂಘಟನೆಯನ್ನು ಇಂದಿನ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರು ರಾಷ್ಟ್ರಸೇವೆ ಮಾಡಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕ ಕೆ ಆಯ್ ಮಕಾನದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದ ನೇತಾಜಿ ಅವರ ದೂರದೃಷ್ಟಿ, ರಾಜಕೀಯ ಅನುಭವ ಮತ್ತು ಯುವಕರ ಬಗ್ಗೆ ಅವರು ಹೊಂದಿದ್ದ ದೃಷ್ಟಿಕೋನ ವಿಶಿಷ್ಟವಾದದ್ದು’ ಎಂದು ಹೇಳಿದರು.
ಶಿಕ್ಷಕರಾದ ಎಸ್ ಎಸ್ ಅರಬ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ,ಡಿ ಎಡ್ ಪ್ರಶಿಕ್ಷಣಾರ್ಥಿಗಳಾದ ಮುಸ್ಕಾನ ಮಂಕಣಿ, ಸಾನಿಯಾ ಪಠಾಣ, ಜುಬಿಯಾ ಬಾಗವಾನ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್