LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಇಂಡಿ ನಗರದಲ್ಲಿ ಬಡಮಕ್ಕಳಿಗೆ ಉಚಿತ ವಸತಿನಿಲಯ ಹಾಗೂ ದಾಸೋಹ ಮತ್ತು ಶಾಖಾ ಮಠ ನಿರ್ಮಾಣ : 30 ರಂದು ಸಭೆ

ಇಂಡಿ: ಇಂಡಿ ನಗರದಲ್ಲಿ ಪಂಚಮಸಾಲಿ ಸಮಾಜದ ಬಡಮಕ್ಕಳಿಗೆ ಉಚಿತ ವಸತಿನಿಲಯ ಹಾಗೂ ದಾಸೋಹ ಮತ್ತು ಶಾಖಾ ಮಠ ನಿರ್ಮಾಣಕ್ಕೆ ಜಾಗ ನೀಡುವ ಕುರಿತು ಚರ್ಚಿಸಲು ಮಾರ್ಚ ೩೦ ರಂದು ಮದ್ಯಾಹ್ನ ೧೨:೦೦ ಘಂಟೆಗೆ ಇಂಡಿ ನಗರದ ಶಾಂತೇಶ್ವರ ಪ್ರೌಢಶಾಲಾ ಆವರಣದಲ್ಲಿ ಪೂರ್ವಭಾವಿ ಸಭೆ ನಿಗದಿಪಡಿಸಲಾಗಿದ್ದು ಸಮಾಜ ಬಾಂಧವರು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಮನವಿ ಮಾಡಿದರು.
ಅವರು ನಗರದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ ಸಂಘದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಅಂದು ಸಮಾಜದ ಶಾಖಾ ಮಠ , ಬಡ ಮಕ್ಕಳಿಗೆ ಉಚಿತ ಪ್ರಸಾದ ನಿಲಯ ಮತ್ತು ಸಮಾಜ ಮಂದಿರ ನಿರ್ಮಾಣ ಕುರಿತು ಚರ್ಚೆ ನಡೆಸಲಿದ್ದು, ಯಾರಾದರೂ ದಾನಿಗಳು ಜಾಗ ನೀಡುತ್ತಿದ್ದರೆ ಸಮಾಜ ಮಂದಿರಕ್ಕೆ ಅವರ ಹೆಸರು ಇಡೋಣ. ಪಂಚಮಸಾಲಿ ಸಮಾಜ ೩ ಬಿ ವರ್ಗದಲ್ಲಿ ಬರುತ್ತಿದ್ದು ವಿದ್ಯಾರ್ಥಿನಿಲಯಗಳಲ್ಲಿ ಅವಕಾಶಗಳು ಕಡಿಮೆ ಸಿಗುತ್ತಿವೆ. ಹೀಗಾಗಿ ಸಮಾಜದ ವಿದ್ಯಾರ್ಥಿಗಳ ಹಿತ ದೃಷ್ಠಿಯಿಂದ ಉಚಿತ ವಸತಿ ಹಾಗೂ ಪ್ರಸಾದ ನಿಲಯ ಅತೀ ಅವಶ್ಯವಾಗಿದೆ ಎಂದರು.
ಸಭೆಯಲ್ಲಿ ಇಂಡಿ ತಾಲೂಕಾ ಪಂಚಮಸಾಲಿ ಸಮಾಜ ಅಧ್ಯಕ್ಷ ವಿ.ಎಚ್. ಬಿರಾದಾರ, ಪ್ರ.ಕಾರ್ಯದರ್ಶಿ ಶಿವಾನಂದ ಚಾಳೀಕಾರ, ಉಮೇಶ ಬಳಬಟ್ಟಿ, ಸುಧಾಕರಗೌಡ ಬಿರಾದಾರ, ಶಿವು ದೇವರ, ಭೀಮಾಶಂಕರ ಮುರಗುಂಡಿ, ಪರಮೇಶ್ವರ ಪತಂಗೆ, ಶ್ರೀಕಾಂತ ಕೂಡಿಗನೂರ, ಮಂಜುನಾಥ ಕಾಮಗೊಂಡ, ಶಾಂತುಗೌಡ ಬಿರಾದಾರ, ರಮೇಶ ಬಿರಾದಾರ, ಅನೀಲ ತೆನ್ನೆಳ್ಳಿ, ವಿನೋದ ಪಾಟೀಲ, ಈರನಗೌಡ ಪಾಟೀಲ, ಅಶೋಕ ಬಳಬಟ್ಟಿ, ಶ್ರೀಕಾಂತ ಗಡಗಲಿ, ಸಚಿನ್ ಮೇಡೇದಾರ ಸೇರಿದಂತೆ ಮತ್ತಿತರರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್