LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪವಿತ್ರ ಉಮ್ರಾ ಯಾತ್ರೆಗೆ ತೆರಳುತ್ತಿರುವ ಹಾಫೀಜ ಫಿರೋಜ್ ಬಾಗವಾನ ಅವರಿಗೆ ಸನ್ಮಾನ

ಇಂಡಿ: ನಗರದ ಅಂಜುಮನ್ ಮರ್ಕಜ್ ಮಸೀದಿಯ ಇಮಾಮರಾಗಿ ಸೇವೆ ಸಲ್ಲಿಸುತ್ತಿರುವ ಹಾಫೀಜ ಫಿರೋಜ್ ಬಾಗವಾನ ಅವರು ಪವಿತ್ರ ಉಮ್ರಾ ಯಾತ್ರೆಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಸಮಾಜದ ಪ್ರಮುಖರು ಹಾಗೂ ಅಂಜುಮನ್ ಮಸೀದಿ ಕಮಿಟಿಯ ವತಿಯಿಂದ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮವನ್ನು ಸಮಾಜ ಸೇವಕ ಹಸನ್ ಮುಜಾವರ್ ಅವರ ನೇತೃತ್ವದಲ್ಲಿ ಅಂಜುಮನ್ ಮಸೀದಿ ಕಮಿಟಿಯ ಪದಾಧಿಕಾರಿಗಳು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಮುಖಂಡರು, ಉಮ್ರಾ ಯಾತ್ರೆ ಮುಸ್ಲಿಂ ಸಮುದಾಯದವರಿಗೆ ಅತ್ಯಂತ ಪವಿತ್ರವಾದ ಧಾರ್ಮಿಕ ಕರ್ತವ್ಯವಾಗಿದ್ದು, ಅಲ್ಲಾಹನ ಮನೆ ಕಾಬಾದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ಒಂದು ಮಹತ್ತರ ಭಾಗ್ಯವಾಗಿದೆ ಎಂದು ಹೇಳಿದರು.
ಈ ವೇಳೆ ಹಾಫೀಜ ಫಿರೋಜ್ ಬಾಗವಾನ ಅವರು ಕಾಬಾ ಶರೀಫ್ನಲ್ಲಿ ದೇಶದ ಶಾಂತಿ, ಸಮಾಜದ ಏಕತೆ ಮತ್ತು ಎಲ್ಲರ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಬೇಕೆಂದು ಸಮುದಾಯದವರು ಮನವಿ ಮಾಡಿದರು. ಅಲ್ಲದೆ, ಇಂಡಿ ನಗರದ ಜನತೆ ಹಾಗೂ ಸಮುದಾಯದ ಅಭಿವೃದ್ಧಿಗಾಗಿ ಕೂಡ ದುವಾ ಮಾಡುವಂತೆ ವಿನಂತಿಸಿದರು.
ಕಾರ್ಯಕ್ರಮದಲ್ಲಿ ಅಂಜುಮನ್ ಮಸೀದಿ ಕಮಿಟಿಯ ಉಪಾಧ್ಯಕ್ಷರಾದ ಮಮ್ಮದ್ ಫಾರೂಕ್ ತುರ್ಕಿ, ಕಾರ್ಯದರ್ಶಿ ರಫಿಕ್ ಇಂಡಿಕರ್, ಸದಸ್ಯರಾದ ಬಶೀರ್ ಇನಾಮದಾರ, ನೂರು ವಾಚ್ಮಿಕರ್, ಅಸ್ಲಾಂ ಪಟೇಲ್, ಮಮ್ಮದ್ ಯಾಸಿನ್ ತುರ್ಕಿ, ಹಸನ್ ಮುಜಾವರ್, ಜಬ್ಬಾರ್ ಸುಂಬಡ, ಮುಬಾರಕ್ ಕೊಲ್ಹಾರ, ಹುಸೇನ್ ಇನಾಮದಾರ, ಜಾವೇದ್ ಪಟೇಲ್, ಸಿದ್ದಿಕ್ ಹುಮನಾಬಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂತ್ಯದಲ್ಲಿ ಹಾಫೀಜ ಫಿರೋಜ್ ಬಾಗವಾನ್ ಅವರ ಸುಖಕರ ಉಮ್ರಾ ಯಾತ್ರೆಗೆ ಎಲ್ಲರೂ ದುಆ ಮಾಡಿದರು.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್