LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೆಆರ್‌ಎಸ್‌ ತವರಿನಲ್ಲೇ ಬತ್ತಿದ ಜಲ; 43 ಕೆರೆಗಳೂ ಬರಿದು!

ಶ್ರೀರಂಗಪಟ್ಟಣ,05: ಬರಗಾಲ ಹಾಗೂ ಕೆಆರ್‌ಎಸ್‌ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಲ್ಲಿ ನೀರು ಹರಿಯದ ಕಾರಣ ತಾಲೂಕಿನಾದ್ಯಂತ ಇರುವ 43 ಕೆರೆಗಳು ಶೇ.99 ರಷ್ಟು ಬರಿದಾಗಿವೆ.

ತಾಲೂಕಿನಾದ್ಯಾಂತ 43 ಕೆರೆ ಹಾಗೂ ಕಟ್ಟೆಗಳಿವೆ. ಈ ಪೈಕಿ ಪಂಚಾಯತ್‌ ರಾಜ್‌ ಇಲಾಖೆ ಯೋಜನೆಯಡಿ 40 ಕೆರೆಗಳಿದ್ದು, ಎಲ್ಲಾಕೆರೆಗಳು ಬತ್ತಿಹೋಗಿವೆ. ಕಾವೇರಿ ನೀರಾವರಿ ನಿಗಮ ವ್ಯಾಪ್ತಿಗೆ ಬರುವ ಅರಕೆರೆ, ಗೆಂಡೆಹೊಸಹಳ್ಳಿ, ದೊಡ್ಡ ಅಂಕನಹಳ್ಳಿ ಕೆರೆಗಳ ಪೈಕಿ ಶೇ.10 ರಷ್ಟು ನೀರು ಮಾತ್ರ ಇದ್ದು, ಶೀಘ್ರ ಮಳೆಯಾಗದಿದ್ದರೆ ಆ ಕೆರೆಗಳು ಸಂಪೂರ್ಣ ಬತ್ತಿ ಹೋಗುತ್ತವೆ.

ಮಳೆಯಾಶ್ರಿತ ಪ್ರದೇಶವನ್ನೇ ಹೊಂದಿರುವ ನೇರಳಕೆರೆಯ ಮೊರಯ್ಯನಕೆರೆ ಹಾಗೂ ತಾವರೆಕಟ್ಟೆ ಕೆರೆಗಳು, ಹುಂಜನಕೆರೆ ಕೆರೆ, ಟಿ.ಎಂ. ಹೊಸೂರು ಜೋಡಿ ಕೆರೆ ಸೇರಿದಂತೆ ನಾನಾ ಕೆರೆಗಳಲ್ಲಿ ಹನಿ ನೀರು ಇಲ್ಲದ ಕಾರಣ ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ತತ್ವಾರ ಒದಗಿ ಬಂದಿದೆ.

ಜಾನುವಾರುಗಳಿಗೆ ಕುಡಿಯಲು ನೀರು ಸಿಗದೆ ಅಲ್ಲೊಂದು, ಇಲ್ಲೊಂದು ಇರುವ ಕೊಳವೆ ಬಾವಿಯನ್ನೋ ಅಥವಾ ಜನರು ಕುಡಿಯಲು ಗ್ರಾಮದಲ್ಲಿ ಟ್ಯಾಂಕರ್‌ ಮೂಲಕ ಸರಬರಾಜು ಮಾಡುತ್ತಿರುವ ನೀರನ್ನೇ ಬಳಸಬೇಕಾಗಿದೆ. ಬಟ್ಟೆ ತೊಳೆಯಲು, ಸ್ನಾನ ಮಾಡಲು ವಾರಗಟ್ಟಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಿಶ್ವೇಶ್ವರಯ್ಯ ನಾಲೆ ಅವಲಂಬಿತ ಜಮೀನು ಹೊಂದಿರುವ ಗ್ರಾಮಗಳಲ್ಲಿ ಬೇಸಿಗೆ ಕಾಲದಲ್ಲಿಯೂ ನಾಲೆಗೆ ನೀರು ಹರಿಸುತ್ತಿದ್ದರಿಂದ ಹಳ್ಳ, ಕೊಳ್ಳಗಳಲ್ಲಿ ನೀರು ಸಿಗುತ್ತಿತ್ತು. ಕಟ್ಟೆಗಳಲ್ಲಿಯೂ ಕೆಲವು ದಿನ ನೀರು ಇರುತ್ತಿತ್ತು. ನಾಲೆ ಆಧುನೀಕರಣ ನೆಪದಲ್ಲಿ ವಿಶ್ವೇಶ್ವರಯ್ಯ ನಾಲೆ, ಉಪ ನಾಲೆಗಳಿಗೆ ನೀರು ಹರಿಸದ ಕಾರಣ ನಾಲೆ ಅವಲಂಬಿತ ಜಮೀನು ಹೊಂದಿದ್ದ ಗ್ರಾಮಗಳ ಜನರು ಜಾನುವಾರುಗಳ ಕುಡಿಯುವ ನೀರಿಗೆ ಹುಡುಕಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳನ್ನು ಜಮೀನುಗಳಿಂದ ಮನೆಗೆ ಕರೆತಂದು ನೀರು ಕುಡಿಸಬೇಕಾದ ಪರಿಸ್ಥಿತಿ ಬಂದೊದಗಿದೆ.

ನಮ್ಮೂರು ಕೆರೆಗೆ ಏತ ನೀರಾವರಿ ಯೋಜನೆಯಡಿ ಮಳೆಗಾದಲ್ಲಿ ನೀರು ತುಂಬಿಸುವಂತೆ ತಾಲೂಕು ಆಡಳಿತಕ್ಕೆ ಹತ್ತಾರು ಬಾರಿ ಮನವಿ ಮಾಡಿದ್ದೇವೆ, ಆದರೂ ಪ್ರಯೋಜನವಾಗಿಲ್ಲ. ಕೆರೆಯಲ್ಲಿ ನೀರು ಇಲ್ಲದ ಕಾರಣ ಗ್ರಾಮದಲ್ಲಿದ್ದ ಕೊಳವೆ ಬಾವಿಗಳು ಬತ್ತಿ ಹೋಗಿವೆ. ಹನಿ ನೀರಿಗೂ ತತ್ವಾರ ಒದಗಿಬಂದಿದೆ. ಶೀಘ್ರ ಮಳೆಯಾಗದಿದ್ದರೆ ನಮ್ಮೂರ ಗ್ರಾಮಸ್ಥರ ಸ್ಥಿತಿ ಚಿಂತಾಜನಕವಾಗುತ್ತದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್