LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಅನುಬೋಧನಾ ಕಾರ್ಯಾಗಾರದಿಂದ ಪಡೆದ ಜ್ಞಾನ ಬೋಧನಾ ಸಮಯದಲ್ಲಿ ಸಹಕಾರಿಯಾಗಲಿದೆ"

ರಾಮದುರ್ಗ: ತರಬೇತಿ ಹಂತದಲ್ಲಿ ಅನುಬೋಧನಾ ಕಾರ್ಯಾಗಾರದಿಂದ ಪಡೆದ ಜ್ಞಾನ ಬೋಧನಾ ಸಮಯದಲ್ಲಿ ಸಹಕಾರಿಯಾಗಲಿದೆ. ಪ್ರಶಿಕ್ಷಣಾರ್ಥಿಗಳು ಅನುಬೋಧನೆಯ ಸಕಲ ಕೌಶಲ್ಯಗಳ ಜ್ಞಾನ ಪಡೆದುಕೊಳ್ಳಬೇಕು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್.ಎಲ್. ಕುಳ್ಳೂರ ಹೇಳಿದರು.
ನಗರದ ವಿದ್ಯಾ ಪ್ರಸಾರಕ ಸಮಿತಿಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿಇಡಿ ವಿದ್ಯಾರ್ಥಿಳಿಗೆ ಏರ್ಪಡಿಸಿದ ಅನುಬೋಧನಾ ಕಾರ್ಯಗಾರವನ್ನು ಉದ್ಘಾಟಸಿ ಮಾತನಾಡಿದ ಅವರು, ಪ್ರಶಿಕ್ಷಣಾರ್ಥಿಗಳು ತರಬೇತಿ ಅವಧಿಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕಾಲೇಜಿನಲ್ಲಿ ಕಲಿಯುವ ವಿಷಯಗಳ ಜ್ಞಾನ ಬೋಧನಾ ಹಂತದಲ್ಲಿ ತಮ್ಮ ವಿದ್ಯಾರ್ಥಿಗಳಿಗೆ ಜ್ಞಾನ ನೀಡಲು ಸಹಕಾರಿಯಾಗುತ್ತದೆ ಎಂದರು.
ಡಾ.ಎನ್.ಎನ್. ವಾಳ್ವೇಕರ ಮಾತನಾಡಿ, ಶಿಕ್ಷಣ ಮಹಾವಿದ್ಯಾಲಯದಲ್ಲಿ ತರಬೇತಿ ಪಡೆಯುವ ಭಾವಿ ಶಿಕ್ಷಕರು, ವೃತ್ತಿ ಬದುಕಿನಲ್ಲಿ ಎದುರಾಗುವ ಸಮಸ್ಯೆಗಳು, ವಿದ್ಯಾರ್ಥಿಗಳಿಗೆ ನೀಡಬೇಕಾದ ಜ್ಞಾನದ ಮಾಹಿತಿಯನ್ನು ನೀಡಲಾಗುತ್ತಿದೆ. ಪಠ್ಯ ವಿಷಯಗಳ ಜೊತೆಗೆ ಪ್ರಶಿಕ್ಷಣಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಕಡೆಗೂ ಗಮನ ಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಮಖಾನಾ ಉಪಾಧ್ಯಕ್ಷ ಪ್ರೊ.ಜಿ.ಬಿ. ಬಟಕುರ್ಕಿ, ಪ್ರೊ.ಜಿ.ಪಿ. ಗಡದೆ, ಡಾ.ವ್ಹಿ.ಬಿ. ವಗ್ಗರ, ಪ್ರೊ. ಶಿವಲೀಲಾ ಗೋಲನ್ನವರ, ಭಾರತಿ ಪಮ್ಮಾರ, ವಿದ್ಯಾರ್ಥಿ ಪ್ರತಿನಿಧಿಗಳಾದ ರಾಜು ಹಣಸಿ, ಅನುಷಾ ರೊಕ್ಕದಕಟ್ಟಿ ಸೇರಿದಂತೆ ಇತರರಿದ್ದರು.
ವಿದ್ಯಾರ್ಥಿನಿ ಸತ್ಯಕ್ಕ ಹೊಸಕೋಟಿ ಸ್ವಾಗತಿಸಿದರು. ತನುಜಾ ಹಿರೇಮಠ ನಿರೂಪಿಸಿ, ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್