LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಾಬಾಸಾಹೇಬರ ೧೨೫ನೇ ಜಯಂತಿ : ಸಕಲ ಸಿದ್ದತೆಗೆ ಸೂಚನೆ

ಇಂಡಿ : ಬಾಬಾಸಾಹೇಬರು ದೇಶದ ಮಹಾನ ವ್ಯಕ್ತಿಗಳಲ್ಲಿ ಒಬ್ಬರು, ಇವರು ಸಂವಿಧಾನ ಶಿಲ್ಪಿ ಇಂತಹ ವ್ಯಕ್ತಿಗಳ ದಿನಾಚರಣೆಯ ಸಮಯದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಭಾಗಿಯಾಗಬೇಕು ಅಂದಾಗ ಮಾತ್ರ ಎಲ್ಲ ರೀತಿಯ ವಿಚಾರಗಳನ್ನು ವಿಚಾರ ನಡೆಸಬಹುದು ಮತ್ತು ಆಗುವಂತಹ ತೊಂದರೆಗಳು, ಅನಾನುಕೂಲತೆಗಳು ಎಲ್ಲವು ತಿಳಿಯಲು ಸಾಧ್ಯ ಎಂದು ಡಿ. ಎಸ್. ಎಸ್. ಮುಖಂಡರು ಸಭೆಯಲ್ಲಿ ಮಾತನಾಡಿದರು.
ಏಪ್ರಿಲ್ ೧೪ ರಂದು ನಡೆಯಲಿರುವ ಬಾಬಾಸಾಹೇಬರ ೧೨೫ನೇ ಜಯಂತಿ ನಿಮಿತ್ಯ ಇಂಡಿ ತಹಸೀಲ್ದಾರ ವಿಜಯ ಕಡಕಭಾವಿ ಇವರ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ ನಡೆಸಲಾಯಿತು.
ಇಂಡಿ ತಾಲೂಕು ತಹಸೀಲ್ದಾರ/ದಂಡಾಧಿಕಾರಿಗಳು ಮಾತನಾಡಿ ಎಲ್ಲ ಅಧಿಕಾರಿಗಳು ಸಭೆಗೆ ಹಾಜರಾಗುವಂತೆ ತಿಳಿಸಿ, ಪ್ರತಿ ಗ್ರಾಮದ ಗ್ರಾಮ ಪಂಚಾಯತ ಹದ್ದೆಯಲ್ಲಿ ಬರುವಂತಹ ಅಂಬೇಡ್ಕರ್ ವೃತ್ತವನ್ನು ಸ್ವಚ್ಛತೆ ಗೊಳಿಸಿ, ಅಲ್ಲಿನ ವಾತಾವರಣ ಸರಿಯಾಗಿ ನೋಡಿಕೊಳ್ಳುವದು ಗ್ರಾಮ ಪಂಚಾಯತ್ ಇಲಾಖೆಗೆ ಅದೇಶಿಸಿದರು.
ಎಲ್ಲ ಇಲಾಖೆಯ ಕಚೇರಿಗಳಲ್ಲಿ ಯಾವುದೆ ಜಯಂತಿ, ಆಚರಣೆಗಳಾಗಲಿ ಎಲ್ಲರ ಸಮ್ಮುಖದಲ್ಲಿ, ಎಲ್ಲರಿಗೆ ಕಾಣುವಂತೆ ಆಚರಣೆ ಮಾಡಬೇಕು, ಎಲ್ಲ ಸಂಘ ಸೌಂಸ್ಥೆಗಳ ಸಹಕಾರದೊಂದಿಗೆ ಆಚರಣೆ ಮಾಡಬೇಕು, ಯಾವುದೆ ತರನಾದ ಅಹಿತಕರ ಘಟನೆಗಳು ಆಗದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳಬೇಕು ಎಂದರು.
ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ ಅವರ ೧೩೫ನೇ ಜಯಂತಿ ಆಚರಣೆಯನ್ನು ದಿನಾಂಕ ೧೪/೦೪/೨೦೨೬ರಂದು ಆಚರಣೆ ಮಾಡುವದು ಎಲ್ಲಾ ತಾಲೂಕ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಆಚರಣೆ ಮಾಡಿ ೯=೦೦ಗಂಟೆಗೆ ತಹಶೀಲ್ದಾರ್ ಕಚೇರಿಯಲ್ಲಿ ಪೂಜಾ ಕಾರ್ಯಕ್ರಮ ನಂತರ ೯=೩೦ಕ್ಕೆ ಪ್ರವಾಸಿ ಮಂದಿರದಿಂದ ಭಾವಚಿತ್ರದ ಮೆರವಣೆಗೆ ಯಲ್ಲಿ ಕಲಾತಂಡ ಕರೆಯುವುದು ಶಿಸ್ತಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸುವುದು ಪರಿಶಿಷ್ಟ ಜಾತಿಯ ತಾಲೂಕಿನ ಅತಿ ಹೆಚ್ಚು ಅಂಕ ಪಡೆದ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಪರಿಶಿಷ್ಟ ಜಾತಿಯ ಉನ್ನತ ಹುದ್ದೆಯನ್ನು ಪಡೆದ ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಎಲ್ಲ ಗ್ರಾಮಗಳ ಮುಖಂಡರಾದ ವಿನಾಯಕ ಗುಣಸಾಗರ, ಸುರೇಶ ನಡಗಡ್ಡಿ, ಭೀಮಾಶಂಕರ್ ತಳವಾರ, ನಿಂಗಪ್ಪ ಶರ್ಮಾ,ಬಾಬು ಗುಡಮಿ, ಚಂದ್ರಶೇಖರ ಹೊಸಮನಿ, ಪೀರಪ್ಪ ಕಟ್ಟಿಮನಿ, ಲಷ್ಮಿಕಾಂತ ಏಳಗಿ, ಶಿವಾನಂದ್ ಬಾಗಲಕೋಟ, ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್