LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ : ಸತೀಶ್ ಜಾರಕಿಹೋಳಿ

ಸಂಕೇಶ್ವರ : ಶಾಸಕ ನಿಖಿಲ್ ಕತ್ತಿ ಅವರಿಗೆ ಹುಕ್ಕೇರಿ ಕ್ಷೇತ್ರದ ರಸ್ತೆ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಆದರೆ ಅವರಿಗೆ ಇಚ್ಛಾಶಕ್ತಿ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೋಳಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪತ್ರಿಕಾಗೋಷ್ಠಿಯಲ್ಲಿ ಸಂಕೇಶ್ವರದಲ್ಲಿನ ಹದಗೆಟ್ಟ ರಸ್ತೆಗಳ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸರಕಾರ ಇದ್ದಾಗ ನಾವು ಯಮಕನಮರಡಿ ಕ್ಷೇತ್ರದಲ್ಲಿನ ರಸ್ತೆಗಳನ್ನು ಅಭಿವೃದ್ಧಿ ಮಾಡಿದೇವೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ, ಸರಕಾರ ಯಾವುದೇ ಇರಲಿ, ಕ್ಷೇತ್ರ ಅಭಿವೃದ್ಧಿ ಪಡಿಸುವ ಇಚ್ಚಾಶಕ್ತಿ ಮುಖ್ಯವಾದದ್ದು,

ಸಂಕೇಶ್ವರದಲ್ಲಿ ಕುಳಿತು ಬೆಂಗಳೂರಿನ ಕಡೆ ಬೊಟ್ಟು ಮಾಡಿದರೆ ಸರಿಯಲ್ಲ, ಕ್ಷೇತ್ರದ ಅಭಿವೃದ್ಧಿಗಾಗಿ ಪರಿಶ್ರಮ ಮತ್ತು ಇಚ್ಛಾ ಶಕ್ತಿ ಮುಖ್ಯವಾದದ್ದು,  ಸರಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.

ಈ ಸಂಧರ್ಭದಲ್ಲಿ ಹಿರಿರಾದ ಅಪ್ಪಾಸಾಹೇಬ್ ಶಿರಕೋಳಿ, ಸಂಕೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಮುಡಶಿ, ಮುಖಂಡರಾದ ಶ್ರೀಕಾಂತ ಹತನೂರೆ, ಬಸನಗೌಡ ಪಾಟೀಲ, ದಿಲೀಪ್ ಹೊಸಮನಿ, ಡಾ! ಜಯಪ್ರಕಾಶ ಕರಜಗಿ, ವಿಕ್ರಮ ಕರನಿಂಗ, ಶಂಕರರಾವ ಹೆಗಡೆ, ಅವಿನಾಶ ನಲವಡೆ, ಬಸವರಾಜ ಕೋಳಿ, ಮಹೇಶ ಹಟ್ಟಿವಳಿ ಸೇರಿದಂತೆ ಅನೇಕರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್