LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಿಸಿಲಿನ ತಾಪ ಹೆಚ್ಚಳ : ಕಛೇರಿ ಅವಧಿಯನ್ನು ಬದಲಾವಣೆ ಮಾಡಲು ಆಗ್ರಹಿಸಿ ಮನವಿ

ರಾಮದುರ್ಗ: ತಾಲೂಕಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಸರಕಾರಿ ನೌಕರರಿಗೆ ಕಛೇರಿಯಲ್ಲಿ ಸಧ್ಯ ಇರುವ ಕೆಲಸದ ಅವಧಿಯಲ್ಲಿ ಕಾರ್ಯ ನಿರ್ವಹಿಸಲು ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಕಛೇರಿ ಅವಧಿಯನ್ನು ಬದಲಾವಣೆ ಮಾಡಿ, ಬೆಳಗಿನ ಸಮಯ ಸೇವೆಗೆ ಅವಕಾಶ ಕಲ್ಪಿಸಬೇಕೆಂದು ರಾಜ್ಯ ನೌಕರರ ಸಂಘದ ತಾಲೂಕಾ ಘಟಕದ ಪದಾಧಿಕಾರಿಗಳು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಬಿಸಿಲ ಅವಧಿಯಲ್ಲಿ ಕೆಲಸ ಮಾಡಲು ತೊಂದರೆ ಆಗಿದೆ. ಜನತೆಗೂ ಸಹ ಕಛೇರಿಗೆ ಬರಲು ತೊಂದರೆ ಆಗುತ್ತಿದೆ. ಕೂಡಲೇ ಬೇಸಿಗೆ ಮುಗಿಯುವ ವರೆಗೆ ಕಛೇರಿ ಅವಧಿಯನ್ನು ಬದಲಾವಣೆ ಮಾಡಿಕೊಡಬೇಕು ಎಂದು ಅವರು ಮನವಿ ಮೂಲಕ ಒತ್ತಾಯಿಸಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ತಮ್ಮ ಮನವಿಯನ್ನು ಪರಿಶೀಲಿಸಿ, ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ, ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನೌಕರರ ತಾಲೂಕಾಧ್ಯಕ್ಷ ಐ.ವೈ. ಪವಾಡಿಗೌಡ್ರ, ಕಾರ್ಯದರ್ಶಿ ಎಂ.ಎಸ್ ಜಂಗವಾಡ. ಹಿರಿಯ ಉಪಾಧ್ಯಕ್ಷ ಅಶೋಕ ಹುಣಸಿಕಟ್ಟಿ, ಲೊಕೇಶ ಚೌಹಾನ್, ಶ್ರೀಕಾಂತ್ ಗುರ್ಲಹೊಸೂರ, ಎಂ.ಕೆ. ಹಂಪಿಹೊಳಿ, ಸಂತೋಷ ಭಜಂತ್ರಿ, ಪಿಡಿಓ ವಿಜಯ್‌ಕುಮಾರ್ ವಣಿಕ್ಯಾಳ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ನೌಕರರ ಸಂಘದ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್