LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

೫ ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿದ್ದು ಸವದಿ ಚಾಲನೆ.


ಮಹಾಲಿಂಗಪುರ: ತೇರದಾಳ ಮತಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿರುವ ಜನಪ್ರಿಯ ಶಾಸಕ ಸನ್ಮಾನ್ಯ ಶ್ರೀ ಸಿದ್ದು ಸವದಿ ಅವರು, ಮಹಾಲಿಂಗಪುರ ನಗರದ ವ್ಯಾಪ್ತಿಯ ಬುದ್ನಿ ಪಿಡಿ ಗ್ರಾಮದ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
೨೦೨೫-೨೬ನೇ ಸಾಲಿನ ಮಾನ್ಯ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ (ಅಒIಆP) ಮಂಜೂರಾದ ?೫ ಲಕ್ಷ ಅನುದಾನದಲ್ಲಿ ಈ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗಿದೆ. ಈ ಕಾಮಗಾರಿಯು ಬುದ್ನಿ ಪಿಡಿ ಗ್ರಾಮದ ಹುಳ್ಳಾಳ ಮತ್ತು ಕಲ್ಲಟ್ಟಿ ತೋಟದಿಂದ ಆರಂಭಗೊಂಡು, ಶಾಲೆಯ ಮಾರ್ಗವಾಗಿ ಪರಪ್ಪ ಮಲ್ಲಪ್ಪ ಖೋತ ಅವರ ತೋಟದವರೆಗೆ ಸಂಪರ್ಕ ಕಲ್ಪಿಸಲಿದೆ.
ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಸಿದ್ದು ಸವದಿ ಅವರು, "ರೈತರ ಮತ್ತು ಸಾರ್ವಜನಿಕರ ದೈನಂದಿನ ಸಂಚಾರಕ್ಕೆ ಅನುಕೂಲವಾಗುವಂತೆ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು," ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಿಕೆಪಿಎಸ್ ಅಧ್ಯಕ್ಷ ಬಸನಗೌಡ ಪಾಟೀಲ, ಬಿಜೆಪಿ ನಗರ ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ ಹಾಗೂ ಬಿಜೆಪಿ ಮುಖಂಡರಾದ ಈರಪ್ಪ ದಿನ್ನಿಮನಿ, ಶೇಖರ ಅಂಗಡಿ,ಶಿವಾನಂದ ಅಂಗಡಿ, ಆನಂದ ಖೋತ, ನಾಗಪ್ಪ ಖೋತ, ವಕೀಲ ರವಿ ಬಾಗಿ, ಲಕ್ಷ್ಮಣ ಖೋತ , ಶನೂರ ತೇರದಾಳ , ಮಾರುತಿ ಹಂದಿಗುಂದ, ಮಲ್ಲಿಕ ಸನದಿ, ಮಲ್ಲಿಕಾರ್ಜುನ ಹಂದಿಗುಂದ, ಬಸವರಾಜ ಹಂದಿಗುಂದ , ಮಲ್ಲಪ್ಪ ಹಂದಿಗುಂದ , ರಜಾಕ ಸನದಿ, ರಫೀಕ ಸನದಿ, ಹನಮಂತ ಕಾರಜೋಳ , ಮಹಾದೇವ ಕಾರಜೋಳ , ಮಹಾಲಿಂಗ ಖೋತ, ಮಹೇಶ ಖೋತ ಸೇರಿದಂತೆ ಅನೇಕ ರೈತ ಮುಖಂಡರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.ಈ ರಸ್ತೆ ಸುಧಾರಣೆಯಿಂದ ಕೃಷಿಕರಿಗೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಬಹಳಷ್ಟು ಅನುಕೂಲವಾಗಲಿದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದರು.
೧೪ mಟಠಿ ೦೧ ಫೋಟೋ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್