Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವೇಶ್ವರ ಅರ್ಬನ ಸೊಸಾಯಿಟಿಗೆ ೫.೩೫ ಕೋಟಿ ರೂ ಲಾಭ : ಮಲ್ಲಿಕಾರ್ಜುನ ಢವಳೇಶ್ವರ 

ಮೂಡಲಗಿ : ಪಟ್ಟಣದ ಬಸವೇಶ್ವರ ಅರ್ಬನ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯೂ ೨೦೨೫-೨೬ ನೇ ಆರ್ಥಿಕ ವ?ದ ಅಂತ್ಯಕ್ಕೆ ೫.೩೫ ಕೋಟಿ ರೂ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಢವಳೇಶ್ವರ ಹೇಳಿದರು.
ಗುರುವಾರದಂದು ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ಮೂಡಲಗಿಯ ಪ್ರಧಾನ ಕಛೇರಿಯಲ್ಲಿ ಜರುಗಿದ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ೬.೯೦ ಕೋಟಿ ರೂ ಶೇರು ಬಂಡವಾಳ, ೨೭೪.೩೬ ಕೋಟಿ ರೂ ಠೇವುಗಳು, ೨೭.೨೧ ಕೋಟಿ ರೂ ನಿಧಿಗಳನ್ನು ಹೊಂದಿ, ವಿವಿಧ ಬ್ಯಾಂಕುಗಳಲ್ಲಿ ಠೇವಣಿದಾರರ ಭದ್ರತೆಗಾಗಿ ೮೧.೩೪ ಕೋಟಿ ರೂ ಗುಂತಾವಣಿ ಮಾಡಿದೆ. ವಿವಿಧ ಕ್ಷೇತ್ರಕ್ಕೆ ೨೦೮.೩೪ ಕೋಟಿ ರೂ ಸಾಲ ವಿತರಿಸಿ, ೩೨೧.೬೭ ಕೋಟಿ ರೂ ದುಡಿಯುವ ಬಂಡವಾಳದೊಂದಿಗೆ, ೧೫೪೪ ಕೋಟಿ ರೂ ವಾರ್ಷಿಕ ವಹಿವಾಟು ಹೊಂದಿದೆ ಎಂದರು.
ಸೊಸಾಯಿಟಿಯ ನಿರ್ದೇಶಕರಾದ ಬಸವರಾಜ ತೇಲಿಯವರು ಮಾತನಾಡಿ, ಸೊಸಾಯಿಟಿಯು ೧೮ ಶಾಖೆಗಳನ್ನು ಹೊಂದಿದ್ದು, ಸಮಾಜದ ವಿವಿಧ ಕ್ಷೇತ್ರಗಳಲ್ಲೂ ಸೇವೆ ಸಲ್ಲಿಸುತ್ತಿರುವ ಮಹನೀಯರನ್ನು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಸತ್ಕರಿಸುವ ಕಾರ್ಯವಾಗುತ್ತಿದೆ. ಸಂಘವು ಪ್ರಗತಿ ಪಥದತ್ತ ಸಾಗಲು ಸಹಕರಿಸಿದ ಆಡಳಿತ ಮಂಡಳಿ, ಶೇರುದಾರರು, ಠೇವುದಾರರು, ಸಾಲ ಮರುಪಾವತಿ ಮಾಡಿದ ಸದಸ್ಯರು ಸೇರಿದಂತೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳನ್ನು ತಿಳಿಸಿದರು.
ಸಭೆಯಲ್ಲಿ ಸೊಸಾಯಿಟಿ ಉಪಾಧ್ಯಕ್ಷ ರವೀಂದ್ರ ಭಾಗೋಜಿ, ನಿರ್ದೆಶಕರಾದ ಗಿರೀಶ ಢವಳೇಶ್ವರ, ಚನ್ನಬಸು ಬಡ್ಡಿ, ಶ್ರೀಕಾಂತ ಹಿರೇಮಠ, ಶ್ರೀಶೈಲ ಮದಗಣ್ಣವರ, ದೇವಪ್ಪ ಕೌಜಲಗಿ, ಕುಸುಮಾ ಆ. ತೇಲಿ, ಸುಮಿತ್ರಾ ಪ್ರ. ಶೇಡಬಾಳ, ಮಹಾದೇವಿ ಶಂ. ಹಿರೇಮಠ, ಲಕ್ಷ್ಮಣ ತೇಳಗಡೆ, ರಾಘವೇಂದ್ರ ಕೆಸಪನಟ್ಟಿ, ಪ್ರಧಾನ ವ್ಯವಸ್ಥಾಪಕರಾದ ಬಸವರಾಜ ಬಡಿಗೇರ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*