LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ: ಕ್ವಿಂಟಾಲ್ ಗೆ  ರೂ.5,875

ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಹೇಳಿಕೆ
ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ: ಕ್ವಿಂಟಾಲ್ ಗೆ  ರೂ.5,875

ಬಳ್ಳಾರಿ,ಫೆ.04 - ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು  ಹೇಳಿದರು.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹಿಂಗಾರು ಹಂಗಾಮಿನ ಕಡಲೆಕಾಳು ಉತ್ಪನ್ನ ಖರೀದಿಸುವ ಮತ್ತು ಖರೀದಿ ಕೇಂದ್ರಗಳನ್ನು ಆರಂಭಿಸುವ ಕುರಿತು ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ 2025-26ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ಗೆ ರೂ.5,875 ದಂತೆ ಫ್ರೂಟ್ಸ್ ತಂತ್ರಾAಶದಲ್ಲಿ ನೊಂದಣಿಯಾಗಿರುವ ರೈತರಿಂದ ಕಡಲೆಕಾಳು ಬೆಳೆದ ವಿಸ್ತೀರ್ಣಕ್ಕೆ ಅನುಗುಣವಾಗಿ ಉತ್ಪನ್ನ ಖರೀದಿಸಲಾಗುತ್ತದೆ. ಬೆಂಬಲ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಫ್ರೂಟ್ಸ್ ತಂತ್ರಾAಶದ ಆಧಾರದ ಮೇಲೆ ರೈತರಿಂದ ಖರೀದಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಖರೀದಿ ಏಜೆನ್ಸಿಯಾಗಿದ್ದು, ಕಡಲೆಕಾಳು ಖರೀದಿಗೆ ಜಿಲ್ಲೆಯಲ್ಲಿ ಬಳ್ಳಾರಿ ಮತ್ತು ಸಿರುಗುಪ್ಪ ಪಟ್ಟಣದಲ್ಲಿ ಖರೀದಿ ಕೇಂದ್ರ ಆರಂಭಿಸಬೇಕಾಗಿದ್ದು, ಖರೀದಿ ಪ್ರಕ್ರಿಯೆಗೆ ಸಂಬAಧಿಸಿದAತೆ ಗೋದಾಮುಗಳನ್ನು ಶುದ್ಧವಾಗಿಟ್ಟುಕೊಳ್ಳಬೇಕು. ಮೂಲಭೂತ ಸೌಕರ್ಯವುಳ್ಳ ಖರೀದಿ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು ತೂಕ ಪ್ರಮಾಣೀಕತೆ ಸೇರಿದಂತೆ ಬೇಕಾದ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಖರೀದಿಸಲು ಈಗಾಗಲೇ ರೈತರ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಫೆ.12 ರಿಂದ ಮೇ 02  ವರೆಗೆ ಉತ್ಪನ್ನ ಖರೀದಿಸಲು ಅವಧಿಯನ್ನು ನಿಗದಿಗೊಳಿಸಲಾಗಿದೆ ಎಂದರು.
ಜಿಲ್ಲೆಯ ರೈತರು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸುವಾಗ ಆಧಾರ್ ಕಾರ್ಡ್, ಪಹಣಿ ಪ್ರತಿ, ಆಧಾರ್ ಲಿಂಕ್ ಆಗಿರುವ ರಾಷ್ಟಿçÃಕೃತ ಬ್ಯಾಂಕಿನ ಪಾಸ್‌ಬುಕ್ ಜೆರಾಕ್ಸ್ ಪ್ರತಿ ಸಲ್ಲಿಸಬೇಕು. ಖರೀದಿ ಕೇಂದ್ರಗಳಲ್ಲಿ ಪಿ.ಓ.ಎಸ್. ಯಂತ್ರದ ಮೂಲಕ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ಆಧಾರ್ ಬಯೋ ಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿದ್ದು, ರೈತರು ಇದಕ್ಕೆ ಸಹಕರಿಸಬೇಕು ಎಂದರು.
ಅದೇರೀತಿಯಾಗಿ ರೈತರು ಫ್ರೂಟ್ಸ್ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳುವ ಕುರಿತು ಸಹ ಅಗತ್ಯ ಮಾಹಿತಿ ರೈತರಿಗೆ ಒದಗಿಸುವಂತೆಯೂ ಸೂಚಿಸಿದರು.
ರೈತರ ಹೆಸರಿನ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಡಿಬಿಟಿ ಮೂಲಕ ಹಣ ಜಮೆ ಆಗಲಿದ್ದು, ರೈತರು ಕಡ್ಡಾಯವಾಗಿ ಎಫ್‌ಐಡಿ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಕೊಳ್ಳುವಂತೆ ತಿಳಿಸಬೇಕು ಎಂದರು.
ಸಭೆಯಲ್ಲಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಓಂಕಾರಯ್ಯ, ಕೃಷಿ ಜಂಟಿ ನಿರ್ದೇಶಕ ಸೋಮಸುಂದರ್, ಸಹಕಾರ ಇಲಾಖೆಯ ಉಪನಿಬಂಧಕ ವೀರಭದ್ರಯ್ಯ, ಕಾನೂನು ಮಾಪನ ಶಾಸ್ತç ಇಲಾಖೆಯ ನಿರೀಕ್ಷಕ ಮನೋಜ್ ಕುಮಾರ್ ಸೇರಿದಂತೆ ಇತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್