LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕದಾದ್ಯಂತ ಇಂದಿನಿಂದ 6 ದಿನಗಳು ಭಾರಿ ಮಳೆ, ಗಾಳಿ ಎಚ್ಚರಿಕೆ

ಬೆಂಗಳೂರು, ಸೆಪ್ಟೆಂಬರ್ 29: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಕರ್ನಾಟಕದಲ್ಲಿ ಇಂದಿನಿಂದ (ಸೆಪ್ಟೆಂಬರ್ 29) ಭಾರಿ ಮಳೆ, ಗಾಳಿ ಎಚ್ಚರಿಕೆ ನೀಡಲಾಗಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಕರ್ನಾಟಕದಾದ್ಯಂತ ಇಂದಿನಿಂದ 6 ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯ ಮುನ್ಸೂಚನೆಯಿದ್ದು, ನಂತರದ ದಿನಗಳಲ್ಲಿ ಚದುರಿದ ಮಳೆಯಾಗಲಿದೆ.



ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತದ ಸಾಧ್ಯತೆಯಿದೆ. ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದ ಗಾಳಿ ಮತ್ತು ಮಳೆ ಮುಂದುವರಿಯಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಭಾಗದಲ್ಲಿ ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ವರುಣನ ಆರ್ಭಟ ಕೊಂಚ ಕಡಿಮೆಯಾಗಲಿದ್ದು, ಚದುರಿದ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡ ಕವಿದ ಹವಾಮಾನ ಮುಂದುವರಿಯಲಿದೆ.



ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು (ಸೆಪ್ಟೆಂಬರ್ 29) ಮತ್ತು 30ರಂದು ಗುಡುಗು ಸಹಿತ ಮಧ್ಯಮದಿಂದ ಭಾರೀ ಮಳೆಯ ಸಾಧ್ಯತೆಯಿದ್ದು, ಬೆಳಗಾವಿ, ಗದಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ 12-20 ಮಿಮೀ ಮಳೆಯಾಗಬಹುದು. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮಧ್ಯಮ ಮಳೆಯ ಸಾಧ್ಯತೆಯಿದ್ದು, ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ 3-6 ಮಿಮೀ ಮಳೆಯಾಗಬಹುದು. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಚದುರಿದ ಮಳೆ ಮುಂದುವರಿಯಲಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್