LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಟರ್ಕಿಯಲ್ಲಿ 6.1ರಷ್ಟು ತೀವ್ರತೆಯ ಭೂಕಂಪ: ಹಲವು ಕಟ್ಟಡಗಳು ನೆಲಸಮ, 22 ಮಂದಿಗೆ ಗಾಯ

ಅಂಕಾರಾ: ಪಶ್ಚಿಮ ಟರ್ಕಿಯಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ ಮೂರು ಕಟ್ಟಡಗಳು ಕುಸಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವು - ನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ.


ವಿಪತ್ತು ಮತ್ತು ತುರ್ತು ನಿರ್ವಹಣಾ ಸಂಸ್ಥೆ (AFAD) ಪ್ರಕಾರ, 6.1ರಷ್ಟು ತೀವ್ರತೆಯ ಭೂಕಂಪವು ಬಲಿಕೇಸಿರ್ ಪ್ರಾಂತ್ಯದ ಸಿಂಡಿರ್ಗಿ ಪಟ್ಟಣದಲ್ಲಿ ಕೇಂದ್ರೀಕೃತವಾಗಿತ್ತು. ಇದು ಸ್ಥಳೀಯ ಸಮಯ (1948 GMT) 22:48 ಕ್ಕೆ 5.99 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಹೇಳಲಾಗಿದೆ.


ಭೂಕಂಪದ ಬಳಿಕ ಪುನರಾವರ್ತಿತ ಕಂಪನಗಳು ಸಂಭವಿಸಿವೆ. ಇಸ್ತಾಂಬುಲ್ ಮತ್ತು ಹತ್ತಿರದ ಪ್ರಾಂತ್ಯಗಳಾದ ಬುರ್ಸಾ, ಮನಿಸಾ ಮತ್ತು ಇಜ್ಮಿರ್‌ನಲ್ಲಿ ಈ ಭೂಮಿ ನಡುಗಿದೆ. ಸಿಂಡಿರ್ಗಿಯಲ್ಲಿ ಕನಿಷ್ಠ ಮೂರು ಖಾಲಿ ಕಟ್ಟಡಗಳು ಮತ್ತು ಎರಡು ಅಂತಸ್ತಿನ ಅಂಗಡಿ ಕುಸಿದಿದೆ ಎಂದು ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ಹೇಳಿದರು. ಹಿಂದಿನ ಭೂಕಂಪದಲ್ಲಿ ರಚನೆಗಳು ಈಗಾಗಲೇ ಹಾನಿಗೊಳಗಾಗಿದ್ದವು.


ಭೂಕಂಪನದಿಂದ ಒಟ್ಟು 22 ಜನರು ಗಾಯಗೊಂಡಿದ್ದಾರೆ ಎಂದು ಬಲಿಕೇಸಿರ್‌ನ ಗವರ್ನರ್ ಇಸ್ಮಾಯಿಲ್ ಉಸ್ತಾಗ್ಲು ಹೇಳಿದ್ದಾರೆ. ಇಲ್ಲಿಯವರೆಗೆ ನಾವು ಯಾವುದೇ ಜೀವಹಾನಿಯಾದ ಬಗ್ಗೆ ವರದಿಯನ್ನು ಪಡೆದುಕೊಂಡಿಲ್ಲ ಎಂದು ಸಿಂದಿರ್ಗಿಯ ಜಿಲ್ಲಾ ಆಡಳಿತಾಧಿಕಾರಿ ಡೊಗುಕನ್ ಕೊಯುಂಕು ಸರ್ಕಾರಿ ಸ್ವಾಮ್ಯದ ಅನಾಡೋಲು ಏಜೆನ್ಸಿಗೆ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್