LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ದ್ವೇಷ ಭಾವನೆ ಕೆರಳಿಸುವ ಹೇಳಿಕೆ: ದಿಂಗಾಲೇಶ್ವರ ಶ್ರೀ ವಿರುದ್ಧ ಪ್ರಕರಣ ದಾಖಲು

ನವಲಗುಂದ,05: ಜಾತಿ, ಧರ್ಮ ಹಾಗೂ ಸಮುದಾಯಗಳ ನಡುವೆ ವೈರತ್ವ ಮತ್ತು ದ್ವೇಷ ಭಾವನೆ ಮೂಡಿಸುವ ಹೇಳಿಕೆ ನೀಡಿದ ಆರೋಪದಡಿ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ನವಲಗುಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇ 2 ರಂದು ನವಲಗುಂದ ಗಾಂಧಿ ಮಾರ್ಕೆಟ್‌ನಲ್ಲಿ ನಡೆದ ಸಮಾವೇಶದಲ್ಲಿ ಶ್ರೀಗಳು ಜಾತಿ, ಧರ್ಮ ಆಧರಿತವಾಗಿ ಮಾತನಾಡಿದ್ದರು. ಅಲ್ಲದೇ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರಿಗೆ ತಮ್ಮ ಜಾತಿ ಮೇಲಿದ್ದಷ್ಟು ಪ್ರೀತಿ ಲಿಂಗಾಯಿತ ಮತ್ತು ಇತರೆ ಸಮುದಾಯಗಳ ಮೇಲಿಲ್ಲ. ಲಿಂಗಾಯತ ಮತ್ತಿತರ ಸಮುದಾಯಗಳನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಹೇಳುವ ಮೂಲಕ ಜಾತಿ, ಧರ್ಮದ ನಡುವೆ ದ್ವೇಷ ಭಾವನೆ ಮೂಡಿಸುವ ಮಾತುಗಳನ್ನಾಡಿದ್ದಾರೆ ಎಂದು ಪ್ರಕರಣದಲ್ಲಿ ದೂರಲಾಗಿದೆ.

ಶಿರಹಟ್ಟಿ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ 10.30ಕ್ಕೆ ಸಭೆ ಕರೆಯಲಾಗಿತ್ತು. ಸಭೆ ಇನ್ನೇನು ಆರಂಭವಾಗುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಚುನಾವಣಾಧಿಕಾರಿಗಳು ಮತ್ತು ಪೊಲೀಸರು, ನೀತಿ ಸಂಹಿತೆ ಇರುವ ಕಾರಣಕ್ಕೆ ಅನುಮತಿ ಪಡೆಯದೇ, ಸಭೆ-ಸಮಾರಂಭ ನಡೆಸಲು ಅವಕಾಶ ನೀಡಲು ಬರುವುದಿಲ್ಲ. ಸಭೆಗೆ ಪರವಾನಗಿ ಕಡ್ಡಾಯವಾಗಿದೆ. ದಯವಿಟ್ಟು ನಮ್ಮ ಕರ್ತವ್ಯಕ್ಕೆ ಸಹಕಾರ ನೀಡುವಂತೆ ಅಧಿಕಾರಿಗಳು ದಿಂಗಾಲೇಶ್ವರ ಶ್ರೀಗಳ ಬಳಿ ಮನವಿ ಮಾಡಿಕೊಂಡರು.

ಆಗ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀಗಳು ಇದು ಧಾರ್ಮಿಕ ಮಠಾಧೀಶರ ಸಭೆಯಾಗಿದ್ದು, ನಾವು ಅನುಮತಿ ಕೇಳಿದರೂ ನೀಡಿಲ್ಲ ಎಂದು ಪೊಲೀಸರು ಹಾಗೂ ಚುನಾವಣಾಧಿಕಾರಿಗಳ ವಿರುದ್ಧ ವಾಗ್ವಾದ ನಡೆಸಿದರು. ಅಲ್ಲದೆ ನಾವು ಸಭೆ ನಡೆಸಿಯೇ ಸಿದ್ಧ ಎಂದು ಪಟ್ಟು ಹಿಡಿಯುವುದರ ಜತೆಗೆ, ಎಲ್ಲ ಸ್ವಾಮಿಗಳೊಂದಿಗೆ ನಗರದ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ