LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕರ್ಚೇಡು ಗ್ರಾಮದಲ್ಲಿ ರಾಮಾಯಣ ಬಯಲಾಟ ಅದ್ದೂರಿ ಪ್ರದರ್ಶನ




ಬಳ್ಳಾರಿ, ಮಾ.16 : ತಾಲೂಕಿನ ಕರ್ಚೇಡು ಗ್ರಾಮದಲ್ಲಿ ಸುಜಾತಮ್ಮ ಬಯಲಾಟ ಕಲಾ ಟ್ರಸ್ಟ್ ವತಿಯಿಂದ ಊರಿನ ಹೈಸ್ಕೂಲ್ ಮೈದಾನದಲ್ಲಿರುವ ರಾಮುಲಮ್ಮ ಗುಡಿ ಸಮೀಪ ಶುಕ್ರವಾರ ಸಂಜೆ ರಂಗಗೀತೆಗಳ ಕಾರ್ಯಕ್ರಮ ಹಾಗೂ ರಾಮಾಯಣ ಬಯಲಾಟ ಪ್ರದರ್ಶನ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಕರ್ಚೇಡು ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಶ್ರೀ ಶಿವಶರಣ ಅಶ್ವತ್ಥಾಮ ತಾತನವರ ಆಶೀರ್ವಾದದೊಂದಿಗೆ ಉದ್ಘಾಟಿಸಿದರು.

ಕಾರ್ಯಕ್ರಮದ ಪ್ರಾರ್ಥನಾ ಗೀತೆಯನ್ನು ಕರ್ನಾಟಕ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಾರ್ಮೋನಿಯಂ ವಾದಕ ವೈ. ರಂಗಾರೆಡ್ಡಿ ಅವರು ಹಾಡಿದರು. ನಂತರ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಸುಜಾತಮ್ಮ, ರಂಗಭೂಮಿ ಕಲಾವಿದೆ ಎರ್ರೆಮ್ಮ ಹಾಗೂ ಬಿ. ಲಕ್ಷ್ಮೀನಾರಾಯಣ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಾಗರಾಜಗೌಡ ಕರ್ಚೇಡು ಅವರ ತಂಡದಿಂದ ರಾಮಾಯಣ ಬಯಲಾಟ ಪ್ರದರ್ಶನ ಭರ್ಜರಿಯಾಗಿ ನಡೆಯಿತು. ಬಯಲಾಟದ ವಿವಿಧ ಪಾತ್ರಗಳನ್ನು ಕಲಾವಿದರು ಅತ್ಯಂತ ಮನೋಜ್ಞವಾಗಿ ನಿರ್ವಹಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ವೈ. ರಂಗಾರೆಡ್ಡಿ ಸೇರಿದಂತೆ ಗ್ರಾಮದ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಬಯಲಾಟ ಕಲಾವಿದರನ್ನು ಸುಜಾತಮ್ಮ ಬಯಲಾಟ ಕಲಾ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಬಯಲಾಟದಲ್ಲಿ ರಾವಣಾಸುರ ಪಾತ್ರವನ್ನು ರಾಜ ಕರ್ಚೇಡು, ಶ್ರೀರಾಮ ಪಾತ್ರವನ್ನು ನಾಗೇಶ್ ವಣೇನೂರು, ಲಕ್ಷ್ಮಣ ಪಾತ್ರವನ್ನು ಬಸವರಾಜ ಬೆಣಕಲ್ಲು, ಅಂಜಿನೇಯ್ಯ ಪಾತ್ರವನ್ನು ಮಲ್ಲಿಕಾರ್ಜುನ ಗೂಳ್ಯಂ, ಮಾರೀಚ ಪಾತ್ರವನ್ನು ಸಂಗಾಲ್ ಸೀನಪ್ಪ, ಸೀತಾದೇವಿ ಪಾತ್ರವನ್ನು ಕೋಟೆ ಅಂಜಿನಮ್ಮ (ಕೂಡ್ಲಿಗಿ) ಹಾಗೂ ಮಾಯಾಸ್ತ್ರೀ ಪಾತ್ರವನ್ನು ನಾಗಮ್ಮ ವೀರಾಪುರ ಅವರು ನಿರ್ವಹಿಸಿದರು.

ಹಾರ್ಮೋನಿಯಂ ವಾದಕರಾಗಿ ವೈ. ರಂಗಾರೆಡ್ಡಿ (ಕೆ. ವೀರಾಪುರ) ಹಾಗೂ ತಬಲಾ ವಾದಕರಾಗಿ ವೀರೇಶ್ ಬಳ್ಳಾರಿ ಸೇವೆ ಸಲ್ಲಿಸಿದರು. ಬಯಲಾಟ ಸಾಮಾನುಗಳನ್ನು ಶ್ರೀ ಬಸವೇಶ್ವರ ರಂಗಸಜ್ಜಿಕೆ, ಬೂದೂಗುಪ್ಪ ಒದಗಿಸಿದ್ದು, ಮೇಕಪ್ ಆರ್ಟಿಸ್ಟ್ ಆಗಿ ಗಂಗಾಧರ ಬೂದೂಗುಪ್ಪ ಕಾರ್ಯನಿರ್ವಹಿಸಿದರು. ಹಿಮ್ಮೇಳ ಮತ್ತು ಮುಮ್ಮೇಳ ವಾದಕರಾಗಿ ಬಾದಮಿ ರಾಜಪ್ಪ, ಪಿ. ಶಾಗಪ್ಪ (ಕರ್ಚೇಡು), ಗಾದಿಲಿಂಗಪ್ಪ ಹಂದ್ಯಾಳ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಎಂ. ಮಲ್ಲಿಕಾರ್ಜುನಸ್ವಾಮಿ ಹಾಗೂ ಕೆ.ಕೆ. ಹಾಳ್ ಅವರು ಸ್ವಾಗತಿಸಿದರು. ಕೊನೆಯಲ್ಲಿ ಸುಜಾತಮ್ಮ ಬಯಲಾಟ ಟ್ರಸ್ಟ್ ಬಳ್ಳಾರಿ ಕಾರ್ಯದರ್ಶಿ ಬಿ. ಲಕ್ಷ್ಮೀನಾರಾಯಣ ಅವರು ವಂದನಾರ್ಪಣೆ ಸಲ್ಲಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್