LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹೊಸ ಮನೆ ಕೊಂಡ ದಂಪತಿ ಸಂತಸದಲ್ಲೇ ಘೋರ ಗುಡ್ಡ ಕುಸಿತದಲ್ಲಿ ಜಲಸಮಾಧಿ

ಚಾಮರಾಜನಗರ, ಜುಲೈ 31: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಘೋರ ಗುಡ್ಡ ಕುಸಿತದಲ್ಲಿ  ಚಾಮರಾಜನಗರ  ಜಿಲ್ಲೆಯ ನಾಲ್ವರು ಮೃತಪಟ್ಟಿದ್ದಾರೆ.

50 ವರ್ಷದ ರಾಜೇಂದ್ರ, 45 ವರ್ಷದ ರತ್ನಮ್ಮ, 62 ವರ್ಷದ ಪುಟ್ಟಸಿದ್ದಶೆಟ್ಟಿ ಮತ್ತು 50 ವರ್ಷದ ರಾಣಿ ಎಂಬವರು ಸಾವನಪ್ಪಿದ್ದಾರೆ. ಇವರೆಲ್ಲರೂ ಚಾಮರಾಜನಗರ ಜಿಲ್ಲೆಯವರು. ರಾಜೇಂದ್ರ ಮತ್ತು ರತ್ನಮ್ಮ ದಂಪತಿ ಮೂಲತಃ ಚಾಮರಾಜನಗರ ತಾಲೂಕಿನ ಇರಸವಾಡಿ ನಿವಾಸಿಗಳಾಗಿದ್ದು, ವಯನಾಡಿನ ಚೂರಲ್ ​ಮಲೈನಲ್ಲಿ ವಾಸವಾಗಿದ್ದರು.

ಕೂಲಿ ಮಾಡಿ ಕೇರಳದಲ್ಲಿ ಬದುಕು ಕಟ್ಟಿಕೊಂಡಿದ್ದ ದಂಪತಿ ಆರು ತಿಂಗಳ ಹಿಂದೆಯಷ್ಟೇ ಹೊಸಮನೆ ಖರೀದಿಸಿದ್ದರು. ಸಂಬಂಧಿಕರು, ಸ್ನೇಹಿತರನ್ನು ಕರೆದು ಗೃಹಪ್ರವೇಶ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಿದ್ದರು. ಈಗ ದುರಂತದಲ್ಲಿ ದಂಪತಿ ಮನೆ ಸಮೇತ ಜಲಸಮಾಧಿಯಾಗಿದ್ದಾರೆ. ಈ ಇಬ್ಬರ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಚಾಮರಾಜನಗರದ ಜಿಲ್ಲೆಯ ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಯನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಗುಂಡ್ಲುಪೇಟೆ ತಹಶೀಲ್ದಾರ್ ರಮೇಶ್ ಬಾಬು ಮೃತರ ಕುಟುಂಬದವರ ಜತೆ ಸಂಪರ್ಕದಲ್ಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್