LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ್ರಬುದ್ಧ ಕೊಲೆ ದೃಢಪಟ್ಟ ಹಿನ್ನೆಲೆ ಪೊಲೀಸ್ ಅಧಿಕಾರಿಯೊಬ್ಬ ವಶಕ್ಕೆ

ಬೆಂಗಳೂರು, ಮೇ.23: ಮೇ.15ರಂದು ಕತ್ತು ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ಪ್ರಭುಧ್ಯಾ ಶವ ಸುಬ್ರಮಣ್ಯಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿತ್ತು. ಈ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರ ತನಿಖೆ ವೇಳೆ ಪ್ರಬುದ್ಧಳನ್ನ ಕೊಲೆ ಮಾಡಿರುವುದು ಧೃಡವಾಗಿದೆ. ಈ ಹಿನ್ನಲೆ ಓರ್ವ ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ

ಇದೇ ಮೇ.15ರಂದು ಪ್ರಭುಧ್ಯಾ ಶವ ಪತ್ತೆಯಾಗಿತ್ತು. ಇದನ್ನು ಪೊಲೀಸರು ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲು ಮಾಡಿದ್ದರು. ಆದ್ರೆ, ಮೃತದೇಹ ಪತ್ತೆಯಾದ ಮೂರು ದಿನಗಳ ನಂತರ ಮೃತ ಯುವತಿ ತಾಯಿ ಸೌಮ್ಯ ಅವರು ನೀಡಿದ ದೂರಿನ ಮೇಲೆ ಸೆಕ್ಷನ್ 302ರಡಿ ಕೊಲೆ ಪ್ರಕರಣ ದಾಖಲು ಮಾಡಲಾಗಿತ್ತು. ಪ್ರಭುಧ್ಯಾ ತಲೆಗೆ ಹೊಡೆದು, ಕತ್ತು ಕೊಯ್ದು, ಮುಖಕ್ಕೂ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ತಾಯಿ ಸೌಮ್ಯ ಆರೋಪಿಸಿದ್ದರು.

ಈ ಹಿನ್ನೆಲೆ ಕೊಲೆ ಪ್ರಕರಣ ದಾಖಲಿಸಿ ಸುಬ್ರಮಣ್ಯಪುರ ಪೊಲೀಸರು ತನಿಖೆ ನಡೆಸುತ್ತಿದ್ದು, ಒಂದು ಕಡೆ ಅನುಮಾನಸ್ಪದ ವ್ಯಕ್ತಿಗಳನ್ನ ವಿಚಾರಣೆ, ಮತ್ತೊಂದು ಕಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಯುತ್ತಿದ್ದು, ಸಿಸಿಟಿವಿಯಲ್ಲಿ ಅನುಮಾನಸ್ಪದವಾಗಿ ಕಂಡು ಬಂದವರನ್ನೂ ಕೂಡಲೇ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ, ಇದೀಗ ಓರ್ವನನ್ನ ವಶಕ್ಕೆ ಪಡೆದಿದ್ದಾರೆ. ಆದರೆ, ಘಟನೆಯಾದ ದಿನದಿಂದ ಪ್ರಭುಧ್ಯಾ ಮೊಬೈಲ್ ಫೋನ್ ಕಾಣೆಯಾಗಿದೆ.

‘ಸದ್ಯ ಪೊಲೀಸರು ಮೊಬೈಲ್ ಫೋನ್ ಎಲ್ಲಿದೆ ಎಂದು ಟ್ರೇಸ್ ಮಾಡುತ್ತಿದ್ದು, ಯಾರಾದರೂ ತೆಗೆದುಕೊಂಡಿದ್ದಾರಾ? ಎಲ್ಲಾದ್ರೂ ಮಿಸ್ ಆಗಿದ್ಯಾ ಎಂದು ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಆಕೆಯ ಕಾಲ್ ಡಿಟೇಲ್ಸ್ ಕೂಡ ಕಲೆ ಹಾಕಲಾಗುತ್ತಿದೆ. ಇನ್ನೊಂದು ಕಡೆ ಪ್ರಭುಧ್ಯಾ ಮರಣೋತ್ತರ ಪರೀಕ್ಷೆ ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ಯುವತಿ ಸಾವಿನ ಬಗ್ಗೆ ನಿಖರ ಮಾಹಿತಿಗಳು ಸಿಗಲಿವೆ. ಸದ್ಯ ಎಲ್ಲಾ ಆಯಾಮಗಳಲ್ಲೂ ಸುಬ್ರಮಣ್ಯಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್