ನವದೆಹಲಿ, ಜುಲೈ 25: ಬಿಹಾರದ ಮಾದರಿಯಲ್ಲಿ ಇಡೀ ದೇಶಾದ್ಯಂತ ಭಾರತೀಯ ಚುನಾವಣಾ ಆಯೋಗ(ECI)ವು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(
SIR) ನಡೆಸಲು ಮುಂದಾಗಿದೆ. ಶೀಘ್ರದಲ್ಲೇ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮತದಾರರ ಪಟ್ಟಿಯ ಸಮಗ್ರತೆಯನ್ನು ರಕ್ಷಿಸಲು ತನ್ನ ಸಾಂವಿಧಾನಿಕ ಆಶಯವನ್ನು ಪೂರೈಸಲು ಆಯೋಗವು ಈಗ ಇಡೀ ದೇಶದಲ್ಲಿ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸಲು ಮತದಾರರ ಪಟ್ಟಿಯ ಸಮಗ್ರತೆಯನ್ನು ಕಾಪಾಡಿಕೊಳ್ಳುವುದು ಮುಖ್ಯವಾಗುತ್ತದೆ. ರಾಷ್ಟ್ರವ್ಯಾಪಿ ಈ ವೇಳಾಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡಲಾಗುತ್ತದೆ.
ಬಿಹಾರದಲ್ಲಿ ಎಸ್ಐಆರ್ ಕುರಿತು ವಿರೋಧ ಪಕ್ಷಗಳ ಕೋಲಾಹಲದ ನಡುವೆಯೇ ಈ ಘೋಷಣೆ ಹೊರಬಿದ್ದಿದೆ. ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹಲವಾರು ಸಂದರ್ಭಗಳಲ್ಲಿ ಈ ಪ್ರಕ್ರಿಯೆಯನ್ನು ಟೀಕಿಸಿದ್ದಾರೆ ಮತ್ತು ರಾಜ್ಯದಲ್ಲಿ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವ ಸುಳಿವು ನೀಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.