LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಣಮಳೆಗೆ ತತ್ತರಿಸಿದ್ದ ಕೊಡಗಿಗೆ ಮತ್ತೇ ಆತಂಕದ ಸ್ಥಿತಿ: 43 ಸ್ಥಳಗಳಿಗೆ ಅಪಾಯದ ಎಚ್ಚರಿಕೆ!

ಕೊಡಗು: ಕಳೆದ ಎರಡು ವರ್ಷಗಳಲ್ಲಿ ಭಾರಿ ಸಮಸ್ಯೆ ಏನೂ ಆಗಿಲ್ಲ. ಆದರೆ, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕೊಡಗಿನಲ್ಲಿ 43 ಪ್ರದೇಶಗಳು ಅಪಾಯಕಾರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಹಟ್ಟಿಹೊಳೆ ಕಾವೇರಿ ನದಿ ಹಾಗೂ ಲಕ್ಷ್ಮಣ ತೀರ್ಥ ನದೀಯ ತಟದಲ್ಲಿ ಇರುವವರು ಎಚ್ಚರ ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ.

ಭಾರತೀಯ ಭೂಗರ್ಭ ಶಾಸ್ತ್ರಜ್ಞರು ಆಡಳಿತಕ್ಕೆ ಒಂದು ವರದಿ ಸಲ್ಲಿಸಿದ್ದು, ಇದು ಕೂಡ ಜನತೆಯ ಆತಂಕ ಹೆಚ್ಚಿಸಿದೆ. ಈ ಹಿಂದೆ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಸ್ಥಳದಲ್ಲೇ ಮತ್ತೆ ಅಪಾಯದ ಸಾಧ್ಯತೆ ಇದೆ ಎಂದು ಅವರು ವರದಿಯಲ್ಲಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ

ತಜ್ಞರ ವರದಿಯ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಕೂಡ ಈ ಬಾರಿಯ ಮಳೆಗಾಲವನ್ನು ಎದುರಿಸಲು ಸಿದ್ಧತೆ ಮಾಡಿದೆ. ತಜ್ಞರು ಹೇಳಿದ ಆ ಪ್ರದೇಶಗಳಲ್ಲಿ ಏನಾದರೂ ಬದಲಾವಣೆಗಳು ಕಾಣಿಸುತ್ತಿವೆಯಾ ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದೆ.

ತಜ್ಞರು ಎಚ್ಚರಿಕೆ ನೀಡಿರುವ ಪ್ರದೇಶಗಳಲ್ಲಿ ಅಗತ್ಯ ಸೇವೆಗಳು ಸುಲಭವಾಗಿ ಲಭ್ಯವರುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ‌ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಹಾಗೂ ಸ್ವಯಂ ಸೇವಕರನ್ನು ಈಗಲೇ ನೆಮಿಸಿಕೊಳ್ಳಲಾಗಿದೆ. ಜೊತೆಗೆ ಸಂಭಾವ್ಯ ಪ್ರವಾಹ ಎದುರಾಗುವ ಏರಿಯಾದ ಸುತ್ತ ಮುತ್ತ 100 ಕ್ಕೂ ಹೆಚ್ಚು ಆಶ್ರಯ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದು, ಎಲ್ಲಾ ಮೂಲಭೂತ ಸೌಕರ್ಯ ಸಿದ್ಧಪಡಿಸಿಕೊಳ್ಳಲಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್