LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿದ ವಿದ್ಯಾರ್ಥಿ

ಕೇರಳ: ಸಾಮಾನ್ಯವಾಗಿ ಯಾವ ಶಾಲೆಗಳಲ್ಲೂ ಮೊಬೈಲ್​ಗಳೊಟ್ಟಿಗೆ ಮಕ್ಕಳು ಬರುವಂತಿಲ್ಲ, ಅದನ್ನು ವಶಪಡಿಸಿಕೊಂಡು ಪೋಷಕರಿಗೆ ಕರೆ ಮಾಡಿ ಎಚ್ಚರಿಕೆ ನೀಡಲಾಗುತ್ತದೆ. ಯಾಕೆಂದರೆ ಮಕ್ಕಳು ಮೊಬೈಲ್​ ಕಡೆಗೆ ಗಮನ ಕೊಟ್ಟರೆ ವಿದ್ಯಾಭ್ಯಾಸದಲ್ಲಿ ಹಿಂದುಳಿಯಬೇಕಾಗುತ್ತದೆ. ಹೀಗಾಗಿ ಶಾಲೆ ಹಾಗೂ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಆದರೆ ಮಕ್ಕಳು ಮೊಬೈಲ್​ಗಳನ್ನು ತೆಗೆದುಕೊಂಡು ಶಿಕ್ಷಕರ ಬಳಿ ಸಿಕ್ಕಿಬೀಳುವ ಪ್ರಕರಣಗಳೂ ಹೆಚ್ಚಾಗಿದೆ.ಅದು ಇದು ಸಬೂಬು ಹೇಳಿ ಅವರಿಂದ ಮೊಬೈಲ್ ವಾಪಸ್ ಪಡೆಯುವುದು ಹೇಗೆ ಎಂಬುದನ್ನು ನೋಡುತ್ತಾರೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಶಿಕ್ಷಕರಿಗೇ ಜೀವ ಬೆದರಿಕೆಯೊಡ್ಡಿದ್ದಾರೆ.

ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಕೇರಳದ ಪಾಲಕ್ಕಾಡ್​ನಲ್ಲಿ ನಡೆದಿದೆ. ವಿದ್ಯಾರ್ಥಿ ತರಗತಿಯಲ್ಲಿ ಮೊಬೈಲ್ ಬಳಕೆ ಮಾಡಿ ಶಾಲಾ ನಿಯಮಗಳನ್ನು ಉಲ್ಲಂಘಿಸಿದ ಘಟನೆ ನಡೆದಿದೆ. ಶಾಲೆಯು ಕಟ್ಟುನಿಟ್ಟಾದ ನೋ-ಫೋನ್ ನೀತಿಯನ್ನು ಹೊಂದಿದೆ. ಮತ್ತು ಫೋನ್ ವಶಪಡಿಸಿಕೊಂಡಿದ್ದಕ್ಕಾಗಿ ಶಿಕ್ಷಕರ ಕ್ರಮದ ವಿರುದ್ಧ ವಿದ್ಯಾರ್ಥಿ ಆಕ್ರೋಶಗೊಂಡಿದ್ದ.

ವಿದ್ಯಾರ್ಥಿಯು ತನ್ನ ಫೋನ್ ತೆಗೆದುಕೊಂಡಾಗ ಆರಂಭದಲ್ಲಿ ಗಲಾಟೆ ಮಾಡಿದ್ದಾನೆ. ನಂತರ ಆತನನ್ನು ಪ್ರಾಂಶುಪಾಲರ ಕಚೇರಿಗೆ ಕರೆಸಿಕೊಂಡು, ಶಾಲೆಯಿಂದ ಹೊರಗೆ ಕಾಲಿಟ್ಟರೆ ತನಗೆ ಕೊಲೆ ಮಾಡುವುದಾಗಿ ಹೇಳಿ ಶಿಕ್ಷಕರಿಗೆ ಬೆದರಿಕೆ ಹಾಕಿದ್ದಾನೆ. ಈ ಘಟನೆ ಶುಕ್ರವಾರ ನಡೆದಿದ್ದು, ಶಿಕ್ಷಕರು ಇದುವರೆಗೆ ಯಾವುದೇ ದೂರು ದಾಖಲಿಸಿಲ್ಲ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್