ತುಮಕೂರು, ಆಗಸ್ಟ್ 04: ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 18 ಕೋತಿಗಳ ಮಾರಣಹೋಮ ನಡೆದಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇತ್ತ ನಗರದಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಸಾವು ಸಂಭವಿಸಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿವೆ. ಸದ್ಯ ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ಕಾರಣವೇನು ಎಂಬುವುದು ತಿಳಿಯಲಿದೆ.
ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆ ಕೋಡಿ ನೀರು ಹರಿಯುವ ಪಕ್ಕದ ಜಮೀನುಗಳಲ್ಲಿ 5 ಗಂಡು ಹಾಗೂ 14 ಹೆಣ್ಣು ಸೇರಿ ಒಟ್ಟು 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವುದು ಪತ್ತೆ ಆಗಿದೆ. ಬೆಳಗ್ಗೆ ರೈತರು ಜಮೀನಿಗೆ ಬಂದಾಗ ನವಿಲುಗಳ ಮೃತದೇಹಗಳು ಪತ್ತೆ ಆಗಿವೆ. ಆಗಸ್ಟ್ 1ರ ರಾತ್ರಿ ನವಿಲುಗಳು ಮೃತಪಟ್ಟ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಇನ್ನು ನವಿಲುಗಳ ಸಾವಿಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಕ್ರಿಮಿನಾಶಕ ಸಿಂಪಡಣೆ ಮಾಡಿರುವ ಬೆಳೆಗಳನ್ನು ಸೇವಿಸಿ ಮೃತಪಟ್ಟಿರಬಹುದು ಅಥವಾ ಯಾರಾದರೂ ಏನಾದರೂ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.