LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬಾಂಗ್ಲಾದವರಿಗೆ ನಕಲಿ ಆಧಾರ್ ಕಾರ್ಡ್‌ ಮಾಡಿಕೊಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು, ನವೆಂಬರ್​ 29: ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರ್ನಾಬ್ ಮಂಡಲ್ ಬಂಧಿತ ಆರೋಪಿ. ಆರೋಪಿ ಅರ್ನಾಬ್ ಮಂಡಲ್ ಮೂಲತಃ ಪಶ್ಚಿಮ ಬಂಗಾಳದವನು. ಈ ಬೆಂಗಳೂರು ಹೊರವಲಯದ ಸೂರ್ಯಸಿಟಿ ಬಳಿ ಸೈಬರ್​ ಸೆಂಟರ್ ತೆರೆದಿದ್ದನು.





ಈ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿ, ತನಿಖೆ ಆರಂಭಿಸಿದಾಗ, ಆರೋಪಿ ಅರ್ನಾಬ್​ ಮಂಡಲ್​ ಸೈಬರ್​ ಸೆಂಟರ್​ನಲ್ಲಿ ನಡೆಯುತ್ತಿರುವ ಅಕ್ರಮ ದಂಧೆ ಬಗ್ಗೆ ತಿಳಿದಿದೆ. ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ಗುರುವಾರ ಸೈಬರ್​ ಸೆಂಟರ್​ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಸಾಕಷ್ಟು ನಕಲಿ ಆಧಾರ್​ ಕಾರ್ಡ್​ ಪತ್ತೆಯಾಗಿವೆ. ಹಾಗೆಯೇ 18 ಮನೆಗಳ ಬಾಡಿಗೆ ಅಗ್ರಿಮೆಂಟ್​​ ಪತ್ತೆಯಾಗಿವೆ.







ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಸಿ.ಕೆ.ಬಾಬಾ ಮಾತನಾಡಿ, ಬಾಂಗ್ಲಾ ಪ್ರಜೆಗಳಿಗೆ ಭಾರತದ ನಕಲಿ ಆಧಾರ್​​​, ಐಡಿ ಕಾರ್ಡ್​ ಮಾಡಿಕೊಡ್ತಿದ್ದನು. ಕಳೆದ ಒಂದು ವರ್ಷದಿಂದ ಇದೇ ರೀತಿ ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರ ದಾಳಿ ವೇಳೆ ನಕಲಿ ದಾಖಲಾತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

18 ಮನೆಗೆ ಸಂಬಂಧಿಸಿದ ಲೀಸ್ ಅಗ್ರಿಮೆಂಟ್,​ 55 ಆಧಾರ್​ ಕಾರ್ಡ್, 40 ಬ್ಯಾಂಕ್ ದಾಖಲಾತಿ, 2 ಕಂಪ್ಯೂಟರ್, 2 ಮೊಬೈಲ್ ಜಪ್ತಿ ಮಾಡಲಾಗಿದೆ. ಒಂದು ಕಾರ್ಡ್​ ಮಾಡಿಕೊಡಲು 8 ಸಾವಿರದಿಂದ 10 ಸಾವಿರ ರೂ. ಪಡೆಯುತ್ತಿದ್ದನು. ನಕಲಿ ಐಡಿ ಕಾರ್ಡ್​ಗಳ ದಂಧೆಯಲ್ಲಿ ಇನ್ನೂ ಹಲವರು ಶಾಮೀಲಾಗಿದ್ದಾರೆ. ನಕಲಿ ಐಡಿ ಕಾರ್ಡ್​ಗಳ ದಂಧೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ