LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

RPC & KK ಪರೀಕ್ಷೆಗಳಿಗೆ ಒಂದೇ ಕೇಂದ್ರ ಕಲ್ಪಿಸುವಂತೆ AIDYO ಆಗ್ರಹ

ಬಳ್ಳಾರಿ, ಜು. 31:: ಆಗಸ್ಟ್ 2ರಂದು ನಡೆಯಲಿರುವ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (Civil PC) ನೇಮಕಾತಿಯ RPC ಹಾಗೂ KK ಪರೀಕ್ಷೆಗಳಿಗೆ ಅಭ್ಯರ್ಥಿಗಳಿಗೆ ಒಂದೇ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಬೇಕು ಎಂದು ಉದ್ಯೋಗಕಾಂಕ್ಷಿಗಳ ಹೋರಾಟ ಸಮಿತಿ ಬಳ್ಳಾರಿ ಜಿಲ್ಲಾ ಸಮಿತಿಯು ಪರೀಕ್ಷಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದೆ.
ಮನವಿಯಲ್ಲಿ, ಸಾವಿರಾರು ಅಭ್ಯರ್ಥಿಗಳಿಗೆ ಬೆಳಿಗ್ಗೆ ಹಾಗೂ ಮಧ್ಯಾಹ್ನ ನಡೆಯುವ RPC ಮತ್ತು KK ಪರೀಕ್ಷೆಗಳಿಗೆ ಬೇರೆ ಬೇರೆ ನಗರಗಳು ಹಾಗೂ ದೂರದ ಪ್ರದೇಶಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಿರುವುದರಿಂದ ತೀವ್ರ ತೊಂದರೆ ಉಂಟಾಗಿದೆ ಎಂದು ತಿಳಿಸಲಾಗಿದೆ. ವಿಶೇಷವಾಗಿ ಬೆಂಗಳೂರಿನಂತಹ ದಟ್ಟ ಸಂಚಾರವಿರುವ ನಗರದಲ್ಲಿ ಒಂದು ಪರೀಕ್ಷಾ ಕೇಂದ್ರದಿಂದ ಮತ್ತೊಂದು ಕೇಂದ್ರಕ್ಕೆ ತಲುಪಲು ಎರಡು ಗಂಟೆಗೂ ಹೆಚ್ಚು ಸಮಯ ಬೇಕಾಗುತ್ತದೆ. ಪರೀಕ್ಷಾ ಪ್ರಾಧಿಕಾರವು ಅಭ್ಯರ್ಥಿಗಳು ಪರೀಕ್ಷೆಗೆ ಎರಡು ಗಂಟೆಗಳ ಮುಂಚಿತವಾಗಿ ಕೇಂದ್ರದಲ್ಲಿ ಹಾಜರಾಗಬೇಕು ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ, ಎರಡು ವಿಭಿನ್ನ ಕೇಂದ್ರಗಳಿಗೆ ಸಮಯಕ್ಕೆ ಸರಿಯಾಗಿ ತಲುಪುವುದು ಅಸಾಧ್ಯವಾಗಿದೆ ಎಂದು ದೂರಲಾಗಿದೆ.
ಈ ವ್ಯವಸ್ಥೆಯಿಂದ ಅಭ್ಯರ್ಥಿಗಳಲ್ಲಿ ಆತಂಕ ಹಾಗೂ ಮಾನಸಿಕ ಒತ್ತಡ ಉಂಟಾಗಿದ್ದು, ಪರೀಕ್ಷೆಗೆ ಕೇವಲ ನಾಲ್ಕು ದಿನಗಳು ಮಾತ್ರ ಉಳಿದಿರುವುದರಿಂದ ಪರೀಕ್ಷಾ ಪ್ರಾಧಿಕಾರ (KEA) ಕೂಡಲೇ ಮಧ್ಯಪ್ರವೇಶಿಸಿ RPC ಹಾಗೂ KK ಎರಡೂ ಪರೀಕ್ಷೆಗಳನ್ನು ಒಂದೇ ಪರೀಕ್ಷಾ ಕೇಂದ್ರದಲ್ಲಿ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಎಐಡಿವೈಒ ಜಿಲ್ಲಾ ಸಮಿತಿಯು ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಜಗದೀಶ್ ನೇಮಕಲ್, ಅಭ್ಯರ್ಥಿಗಳಾದ ಶ್ವೇತಾ ಕೆ.ಎನ್., ಲೋಕೇಶ್ ಹಾಗೂ ಮೌನೇಶ್ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್