LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಂಗಳೂರಿನಿಂದ ಅಬುಧಾಬಿಗೆ ದಿನವೂ ಏರ್​ ಇಂಡಿಯಾ ಸಂಚಾರ

ಮಂಗಳೂರು: ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲು ಏರ್ ಇಂಡಿಯಾ ಎಕ್ಸ್​ಪ್ರೆಸ್ ನಿರ್ಧರಿಸಿದ್ದು, ವಾರದಲ್ಲಿ ನಾಲ್ಕು ದಿನ ಸಂಚರಿಸುತ್ತಿದ್ದ ವಿಮಾನಗಳು ಜುಲೈ 22 ರಿಂದ ಪ್ರತಿದಿನ ಕಾರ್ಯಾಚರಿಸಲಿವೆ.


ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್​ಪ್ರೆಸ್ - 1 ವಿಮಾನ ಸೇರಿ ನಿತ್ಯ 5 ವಿಮಾನಗಳು ಬೆಂಗಳೂರು - ಮಂಗಳೂರು ನಡುವೆ ಕಾರ್ಯಾಚರಿಸುತ್ತಿವೆ. ಜುಲೈ 8ರಿಂದ ಈ ಸಂಖ್ಯೆ 6ಕ್ಕೆ ಏರಿಕೆ ಆಗಲಿದೆ.


ಏರ್ ಇಂಡಿಯಾ ಎಕ್ಸ್​ಪ್ರೆಸ್ 2 ನೇ ವಿಮಾನ ಬೆಂಗಳೂರಿನಿಂದ ಮಂಗಳೂರಿಗೆ ಯಾನ ಆರಂಭಿಸುತ್ತಿದೆ. ಇದು ಜುಲೈ 22ರಿಂದ ಲಭ್ಯವಾಗಲಿದ್ದು, ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸಲಿದೆ. ಈ ವಿಮಾನವು ಬೆಂಗಳೂರಿನಿಂದ ಮಂಗಳೂರಿಗೆ ಬಂದು ಅಬುಧಾಬಿಯತ್ತ ಪ್ರಯಾಣ ಬೆಳೆಸಲಿದೆ.


ಬೆಂಗಳೂರಿಗೆ ಇನ್ನಷ್ಟು ವಿಮಾನ: ಆಗಸ್ಟ್ 1 ರಿಂದ ಬೆಂಗಳೂರು - ಮಂಗಳೂರು ಸೆಕ್ಟರ್​​ನಲ್ಲಿ ವಾರದಲ್ಲಿ ಮೂರು ದಿನ (ಸೋಮವಾರ, ಬುಧವಾರ ಮತ್ತು ಶುಕ್ರವಾರ) ಏರ್ ಇಂಡಿಯಾ ಎಕ್ಸ್​ಪ್ರೆಸ್​ನ ಇನ್ನೊಂದು ವಿಮಾನ ಸೇವೆ ಆರಂಭಿಸಲಾಗುವುದು. ಮುಂಬೈ - ಮಂಗಳೂರು ಸೆಕ್ಟರ್​​ನಲ್ಲಿಯೂ ಏರ್ ಇಂಡಿಯಾ ಎಕ್ಸ್​ಪ್ರೆಸ್ ಮಧ್ಯಾಹ್ನದ ನಂತರದ ವಿಮಾನವನ್ನು ಆರಂಭಿಸಲಾಗವುದು ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್