LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಏರ್​ ಇಂಡಿಯಾ ವಿಮಾನ ದುರಂತ: ಪವಾಡ ಸದೃಶ ರೀತಿಯಲ್ಲಿ ಓರ್ವ ಪ್ರಯಾಣಿಕ ಬಚಾವ್

ಅಹಮದಾಬಾದ್: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರ ಪೈಕಿ ಓರ್ವ ಪವಾಡಸದೃಶವಾಗಿ ಸಾವಿನ ದವಡೆಯಿಂದ ಪಾರಾಗಿರುವ ಮಾಹಿತಿ ಲಭ್ಯವಾಗಿದೆ. ಅಹಮದಾಬಾದ್​ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿ ನಗರದಲ್ಲಿರುವ ಬಿಜೆ ಮೆಡಿಕಲ್​ ಕಾಲೇಜಿನ ಹಾಸ್ಟೆಲ್​ ಕಟ್ಟಡದ ಮೇಲೆ ಏಕಾಏಕಿ ಪತನಗೊಂಡಿದ್ದು, ದುರಂತಕ್ಕೀಡಾದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಓರ್ವ ಪವಾಡಸದೃಶವಾಗಿ ಸಾವಿನ ದವಡೆಯಿಂದ ಪಾರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.


ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, "ಸೀಟ್​ ನಂಬರ್​ 11A ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಸಾವಿನ ಸಂಖ್ಯೆಯ ಬಗ್ಗೆ ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ. ವಿಮಾನವು ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು" ಎಂದು ಹೇಳಿದ್ದಾರೆ.

ಪವಾಡಸದೃಶವಾಗಿ ಬದುಕುಳಿದ ಪ್ರಯಾಣಿಕರನ್ನು ಬ್ರಿಟಿಷ್ ಪ್ರಜೆ ವಿಶ್ವಸ್‌ಕುಮಾರ್ ರಮೇಶ್ ಎಂದು ಗುರುತಿಸಲಾಗಿದೆ. ಮುಖ ಮತ್ತು ಇತರಡೆ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೃಶ್ಯಗಳು ಕಂಡು ಬಂದಿವೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


 ಘಟನಾ ಸ್ಥಳಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪರಿಸ್ಥಿತಿಯನ್ನು ಅವಲೋಕಿಸಿದರು. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಕೂಡ ಅವರೊಂದಿಗೆ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್