LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಪತ್ತು ಸಂದರ್ಭದಲ್ಲಿ ಮುಂಜಾಗ್ರತಾ ಅರಿವು ಅಗತ್ಯ : ಅಜಯ್ ಕುಮಾರ್




ಬಳ್ಳಾರಿ,ಜ.22- ಯಾವುದೇ ವಿಪತ್ತುಗಳು ಸಂಭವಿಸಿದಾಗ ತತಕ್ಷಣ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಅರಿವು ಹೊಂದಬೇಕು ಎಂದು ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡದ ಇನ್ಸ್ ಪೆಕ್ಟರ್ ಅಜಯ್ ಕುಮಾರ್ ಅವರು ಹೇಳಿದರು.
ಸಿರುಗುಪ್ಪ ತಾಲ್ಲೂಕಿನ ದೇಶನೂರು ಗ್ರಾಮದ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಆಯೋಜಿಸಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿ 16 ಎನ್‌ಡಿಆರ್‌ಎಫ್ ತಂಡಗಳಿದ್ದು, ವಿಪತ್ತು ಸನ್ನಿವೇಶ ಎದುರಾದಾಗ ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡಗಳು ಸದಾ ಸಿದ್ಧರಿರುತ್ತಾರೆ. ಸಾರ್ವಜನಿಕರು ಸಹ ಅಗತ್ಯ ಸಹಕಾರ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಕಚೇರಿಯ ಪ್ರಕೃತಿ ವಿಕೋಪ ಪರಿಣಿತ ಪರಮೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಗುರುತಿಸಿದ್ದು, ಎನ್‌ಡಿಆರ್‌ಎಫ್ ತಂಡದ ಸದಸ್ಯರು ಪ್ರತಿ ವಿಪತ್ತುಗಳ ಕುರಿತು ಅರಿವು ಮೂಡಿಸುವರು. ವಿಪತ್ತುಗಳು ಸಂಭವಿಸಿದಾಗ ಸನ್ನದ್ಧಗೊಳಿಸಲು ಕೌಶಲ್ಯಗಳನ್ನು ಪ್ರಾತ್ಯಕ್ಷಿಕೆ ಮೂಲಕ ಅಭ್ಯಾಸ ಮಾಡಿಸುವರು ಹಾಗೂ ಪ್ರಥಮ ಚಿಕಿತ್ಸೆ, ಸಿಪಿಆರ್ ವಿಧಾನಗಳು ತಿಳಿಸುವರು. ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.
ಎನ್‌ಡಿಆರ್‌ಎಫ್ ಸಿಬ್ಬಂದಿ ನಾಗರಾಜ್ ಮತ್ತು ತಂಡದ ಎಲ್ಲಾ ಸದಸ್ಯರು ಬೆಂಕಿ ಅವಘಡಗಳು, ಪ್ರವಾಹ, ಭೂಕಂಪ ಇತ್ಯಾದಿ ವಿಪತ್ತುಗಳ ಮುಂಜಾಗೃತೆ, ಸನ್ನದ್ಧತೆ ಬಗ್ಗೆ ತಿಳಿಸುತ್ತಾ ಕೆಲವು ಶಿಬಿರಾರ್ಥಿಗಳಿಂದ ಅಭ್ಯಾಸಿಸಿದರು.
ಈ ವೇಳೆ ಎನ್‌ಡಿಆರ್‌ಎಫ್ ಸಬ್ ಇನ್ಸ್ ಪೆಕ್ಟರ್ ಮುನ್ನಿಕೃಷ್ಣ, ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯ ಡಿಜಿಎಂ ರಾಜಬಾಬು, ಸಿರುಗುಪ್ಪ ತಾಲ್ಲೂಕು ಕಂದಾಯ ನಿರೀಕ್ಷಕ ಮಂಜುನಾಥ ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಕಾರ್ಮಿಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್