LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರಿನಲ್ಲಿ ವರುಣಾಬ್ಬರ, ರಸ್ತೆ, ಚರಂಡಿ, ನಿಲ್ದಾಣ, ಬಡಾವಣೆಗಳು ಜಲಾವೃತ: ಸಂಚಾರ ವ್ಯತ್ಯಯಕ್ಕೆ ಪರ್ಯಾಯ ಮಾರ್ಗ

ಬೆಂಗಳೂರು, ಮೇ 20: ಬೆಂಗಳೂರು ಮಹಾನಗರದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮೆಜೆಸ್ಟಿಕ್, ಕೆ.ಆರ್​.ಮಾರ್ಕೆಟ್, ಜಯನಗರ, ಚಾಮರಾಜಪೇಟೆ, ಬನಶಂಕರಿ, ಶಾಂತಿನಗರ, ವಿಜಯನಗರ, ಚಂದ್ರಾಲೇಔಟ್, ರಾಜಾಜಿನಗರ, ಆರ್.ಟಿ.ನಗರ, ಹೆಬ್ಬಾಳ, ಮಲ್ಲೇಶ್ವರಂ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಯಶವಂತಪುರ, ಪೀಣ್ಯ, ಬಿಟಿಎಂ ಲೇಔಟ್ ಸೇರಿ ಹಲವೆಡೆ ರಾತ್ರಿಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ಪೈಕಿ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಬೆಳಗ್ಗೆ ಮಳೆ ಜೋರಾಗಿದೆ. ಪರಿಣಾಮವಾಗಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.

ಪುಟ್ಟೇನಹಳ್ಳಿ ಮುಖ್ಯರಸ್ತೆ ಕಡೆಯಿಂದ ಕೊತ್ತನೂರು ದಿನ್ನೆ ಜಂಕ್ಷನ್ ಕಡೆಗೆ ಹಾಗೂ ಹೊಸಗುಡ್ಡದಹಳ್ಳಿ ಜಂಕ್ಷನ್ ಕಡೆಯಿಂದ ಮೈಸೂರು ರಸ್ತೆ ಟೋಲ್ಗೇಟ್ ಕಡೆಗೆ. ಮಳೆನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರುತ್ತದೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವುದರಿಂದ ರೂಪೇನ ಅಗ್ರಹಾರದ ಬಳಿ ರಸ್ತೆ ಜಲಾವೃತಗೊಂಡಿದ್ದು ಹೊಸೂರು ಮುಖ್ಯ ರಸ್ತೆ ಮೂಲಕ ನಗರದ ಒಳ ಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಆದ್ದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸಿ ಸಹಕರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್