LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು






ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ  ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.



ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.


ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

 



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ